ಜನರ ಆರೋಗ್ಯ ದೃಷ್ಟಿಯಿಂದ ತಾಲ್ಲೂಕಿನಾದ್ಯಂತ ಶುದ್ಧ ನೀರಿನ ಘಟಕ ಸ್ಥಾಪನೆ

- Advertisement -
- Advertisement -

ಗ್ರಾಮೀಣ ಭಾಗದ ಜನರ ಆರೋಗ್ಯ ದೃಷ್ಟಿಯಿಂದ ತಾಲ್ಲೂಕಿನಾದ್ಯಂತ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿ ಕೇಂದ್ರಸ್ಥಾನದಲ್ಲಿ ಶನಿವಾರ ಸುಮಾರು ೭ ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶುದ್ದ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಕಲುಷಿತ ನೀರಿನ ಸೇವನೆಯಿಂದ ಗ್ರಾಮೀಣ ಭಾಗದ ಬಹುತೇಕ ಜನ ವಿವಿಧ ಖಾಯಿಲೆಗಳಿಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಮುಂದಾಗಿದ್ದು ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಈಗಾಗಲೇ ಶುದ್ದ ಕುಡಿಯುವ ನೀರಿನ ಘಟಕಗಳ ಉದ್ಘಾಟನೆಯಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿಯೂ ಶುದ್ದ ನೀರಿನ ಘಟಕಗಳನ್ನು ಸ್ಥಾಪಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ ಶುದ್ದ ನೀರಿನ ಘಟಕ ಸಾರ್ವಜನಿಕರ ಸ್ವತ್ತಾಗಿದ್ದು ಇದರ ನಿರ್ವಹಣೆ ಸೇರಿದಂತೆ ಘಟಕದ ಸುತ್ತಲೂ ನೈರ್ಮಲ್ಯ ಕಾಪಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಗ್ರಾಮಸ್ಥರು ಸಹಕರಿಸಬೇಕು. ಪ್ರತಿಯೊಬ್ಬರೂ ಶುದ್ದ ನೀರಿನ ಸೇವನೆ ಮಾಡುವುದರಿಂದ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಚೀಮಂಗಲ ಗ್ರಾಮದ ಗ್ರಾಮಸ್ಥರಿಗಾಗಿ ಉಚಿತವಾಗಿ ಸುಮಾರು ೪೦೦ ಕುಡಿಯುವ ನೀರಿನ ಕ್ಯಾನ್ಗಳನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾರಾಯಣಸ್ವಾಮಿ ವಿತರಿಸಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾಮುನಿರಾಜು, ಸದಸ್ಯೆ ತನುಜಾರಘು, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಳಿನಾ ಮಂಜುನಾಥ್, ಉಪಾಧ್ಯಕ್ಷ ನಾರಾಯಣಸ್ವಾಮಿ, ಸದಸ್ಯರಾದ ಸುಮಾ ಮಂಜುನಾಥ್, ಸೌಮ್ಯ ಮಂಜುನಾಥ್, ಕುಡಿಯುವ ನೀರು ಸರಬರಾಜು ಇಲಾಖೆಯ ವಾದಿರಾಜ್, ಅಶೋಕ್, ಪಿಡಿಓ ಡಿ.ಹರೀಶ್ಗೌಡ, ಸಿ.ಎಂ.ಮುನಿರಾಜು, ಮೋಹನ್, ಬಸವರಾಜ್, ಅಯ್ಯಣ್ಣ, ಎಚ್ ಕ್ರಾಸ್ ರವಿ ಮತ್ತಿತರರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!