ಕಷ್ಟದಲ್ಲಿರುವವರಿಗೆ ನೆರವಾಗುವುದು ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಸಂಘಟನೆಯ ಮುಖ್ಯ ಉದ್ದೇಶವಾಗಬೇಕು ಎಂದು ಜಯಕರ್ನಾಟಕ ಜಿಲ್ಲಾಧ್ಯಕ್ಷ ಶ್ರೀನಿವಾಸ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅವರು ಮಾತನಾಡಿದರು.
ಸಾಮಾಜಿಕ ವ್ಯವಸ್ಥೆಯಲ್ಲಿ ಅಭಿವೃದ್ಧಿ ಸಾಧಿಸಬೇಕಾದರೆ ಸಂಘಟನೆ ಮುಖ್ಯ. ಸಂಘಟನೆಯ ಮುಖ್ಯ ಉದ್ದೇಶ ಸಾಮಾಜಿಕ ಜಾಗೃತಿಯಾಗಿದೆ. ರಾಜಕೀಯವನ್ನು ದೂರವಿಟ್ಟು ಸಾಮಾಜಿಕ ಬದ್ಧತೆ ನಿಮ್ಮ ಧ್ಯೇಯವಾಗಲಿ ಎಂದು ಸಲಹೆ ನೀಡಿದರು.
ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾಗಿ ನಲ್ಲಿಮರದಹಳ್ಳಿಯ ಎಂ.ಮುರಳಿ, ನಗರ ಘಟಕದ ಅಧ್ಯಕ್ಷರಾಗಿ ಎಂ.ಮಹಬೂಬ್ಪಾಷ, ತಾಲ್ಲೂಕು ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ಅಕ್ರಂಪಾಷ, ಎಸ್ಸಿ ಘಟಕದ ಅಧ್ಯಕ್ಷರಾಗಿ ದೇವರಮಳ್ಳೂರು ಕೃಷ್ಣಪ್ಪರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗುಡಿಬಂಡೆ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್(ಬುಲೆಟ್), ಚಿಂತಾಮಣಿಯ ವೆಂಕಟರಾಮರೆಡ್ಡಿ ಹಾಜರಿದ್ದರು.
- Advertisement -
- Advertisement -
- Advertisement -