19.1 C
Sidlaghatta
Tuesday, January 13, 2026

ಜಾತಿ, ವೃತ್ತಿ, ಧರ್ಮ ಮೀರಿದ್ದು ಕ.ಸಾ.ಪ

- Advertisement -
- Advertisement -

ಜಿಲ್ಲೆಯ ನೆಲ, ಜಲ, ಭಾಷೆ, ಸಂಸ್ಕೃತಿ ಸೇರಿದಂತೆ ಇತರೆ ಆಶೋತ್ತರಗಳನ್ನಿಟ್ಟುಕೊಂಡು ಪ್ರಸಕ್ತ ಸಾಲಿನ ಕಸಾಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಮತನೀಡಿ ಗೆಲ್ಲಿಸಿ ಎಂದು ಕ.ಸಾ.ಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕೈವಾರ ಶ್ರೀನಿವಾಸ್ ಕೋರಿದರು.
ನಗರ ಹಾಗೂ ತಾಲ್ಲೂಕಿನಲ್ಲಿ ಸೋಮವಾರ ಮತಯಾಚನೆ ಮಾಡಿ ಅವರು ಮಾತನಾಡಿದರು. ಸಾಹಿತ್ಯದ ಪರಿಚಾಲಕನಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕಸಾಪ ಕಾರ್ಯಕ್ರಮಗಳನ್ನು ನಡೆಸುವುದು, ಗ್ರಾಮೀಣ ಭಾಗದಲ್ಲಿನ ಪ್ರತಿಭೆಗಳನ್ನು ಗುರುತಿಸುವುದು, ಪ್ರೋತ್ಸಾಹಿಸುವುದು, ಕನ್ನಡದ ಓದುವಿಕೆಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶವಿದೆ. ಜಾತಿ, ವೃತ್ತಿ, ಧರ್ಮ, ಮೇಲು, ಕೀಳು ಎಂಬುದು ಕ.ಸಾ.ಪ ದಲ್ಲಿ ಇಲ್ಲ. ಮುಂದೆಯೂ ಅದೇ ವಿಶ್ವಕನ್ನಡದ ಸದುದ್ದೇಶವು ಮುಂದುವರೆಯಲಿದೆ ಎಂದರು.
ತಾಲ್ಲೂಕಿನ ಮೇಲೂರು, ಮಳ್ಳೂರು, ಅಪ್ಪೇಗೌಡನಹಳ್ಳಿ ಹಾಗೂ ನಗರದಲ್ಲಿ ಅವರು ಕಸಾಪ ಸದಸ್ಯರ ಬೆಂಬಲವನ್ನು ಕೋರಿದರು.
ಎಸ್.ವಿ.ನಾಗರಾಜರಾವ್, ಬಿ.ಆರ್.ಅನಂತಕೃಷ್ಣ, ವಿ.ಕೃಷ್ಣ, ವಾಸು, ಶಂಕರ್ ಮತ್ತಿತರರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!