Home News ಜಾನಪದ ತಜ್ಞ ಡಾ.ಜಿ.ಶ್ರೀನಿವಾಸಯ್ಯ ನಿಧನ

ಜಾನಪದ ತಜ್ಞ ಡಾ.ಜಿ.ಶ್ರೀನಿವಾಸಯ್ಯ ನಿಧನ

0

ನಗರದ ಸಿ.ಆರ್‌.ಲೇಔಟ್‌ ನಿವಾಸಿ ಜಾನಪದ ತಜ್ಞ ಡಾ.ಜಿ.ಶ್ರೀನಿವಾಸಯ್ಯ(43) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಚಿಕ್ಕಬಳ್ಳಾಪುರದ ಪಂಚಗಿರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದ ಡಾ.ಜಿ.ಶ್ರೀನಿವಾಸಯ್ಯ ಸಂಶೋಧನಾ ಲೇಖನಗಳ ಸಂಗ್ರಹ ಪುಸ್ತಕ ‘ತಣಿಗೆ’ ರಚಿಸಿದ್ದಾರೆ. ಹಲವು ಕೃತಿಗಳನ್ನು ತೆಲುಗಿನಿಂದ ಕನ್ನಡಕ್ಕೆ ಅನುವಾದಿಸಿದ್ದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಯೋಜನೆ ಗ್ರಾಮ ಚರಿತ್ರೆ ಕೋಶದ ಜಿಲ್ಲಾ ಸಂಚಾಲಕರಾಗಿದ್ದರು. ಮೃತರ ಅಂತ್ಯಕ್ರಿಯೆಯನ್ನು ಸವರ ಸ್ವಗ್ರಾಮ ಶ್ರೀನಿವಾಸಪುರ ತಾಲ್ಲೂಕಿನ ದೇವುಲಪಲ್ಲಿಯಲ್ಲಿ ಬುಧವಾರ ನೆರವೇರಿಸಲಾಯಿತು.

error: Content is protected !!