ಜಾನಪದ ಹಬ್ಬ

- Advertisement -
- Advertisement -

ನಾಗರೀಕತೆ ಬೆಳೆದಂತೆಲ್ಲಾ ಗ್ರಾಮೀಣ ಪ್ರದೇಶಗಳ ಸಂಸ್ಕøತಿ ಮತ್ತು ಜನಪದ ಕಲೆಗಳನ್ನು ಮರೆಯುತ್ತಿದ್ದು ಮಕ್ಕಳಿಗೆ ಜನಪದ ಕಲೆ ಹಾಗು ಹಿಂದಿನ ನಮ್ಮ ಸಂಪ್ರದಾಯದ ಬಗ್ಗೆ ತಿಳಿಸುವ ಸಲುವಾಗಿ ಶಾಲೆಯಲ್ಲಿ ಜಾನಪದ ಹಬ್ಬ ಆಚರಿಸಲಾಗುತ್ತಿದೆ ಎಂದು ಡಾಲ್ಫಿನ್ ವಿದ್ಯಾಸಂಸ್ಥೆಯ ಅಧ್ಯಕ್ಷ ನಾಗರಾಜ್ ಅಭಿಪ್ರಾಯಪಟ್ಟರು.
ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಾನಪದ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾಗಾರೀಕತೆ, ಆಧುನೀಕತೆ ನೆಪದಲ್ಲಿ ನಮ್ಮ ಜಾನಪದ ಕಲೆ, ಗ್ರಾಮೀಣ ಸಂಸ್ಕøತಿಗಳು ಮರೆಯಾಗುತ್ತಿದ್ದು ಇಂದಿನ ಮಕ್ಕಳಿಗೆ ಜಾನಪದ ಹಾಗು ಗ್ರಾಮೀಣ ಸಂಸ್ಕøತಿಯ ಬಗ್ಗೆ ತಿಳಿಸಲು ಜಾನಪದ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದ್ದು ಇಂದು ಶಾಲೆಯಲ್ಲಿ ಗ್ರಾಮೀಣ ಜನಜೀವನ, ಕೃಷಿ, ಆಚಾರ, ವಿಚಾರ, ಪರಿಸರವನ್ನು ವಿದ್ಯಾರ್ಥಿಗಳು ಸೃಷ್ಠಿಸಿದ್ದಾರೆ ಎಂದರು.
ಸಂಸ್ಕೃತಿಯನ್ನು ಬಿಂಬಿಸುವ ವೇಷಭೂಷಣಗಳನ್ನು ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರು ಧರಿಸಿ ಶಾಲೆಯನ್ನು ಹೂಗಳಿಂದ ಅಲಂಕರಿಸಲಾಗಿತ್ತು.
ಬಣ್ಣಬಣ್ಣದ ರಂಗೋಲಿಗಳು ಸೇರಿದಂತೆ ವಿದ್ಯಾರ್ಥಿಗಳಿಂದ ವೇಷ ಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಡಾಲ್ಫಿನ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಕೃಷ್ಣಪ್ಪ, ಡಿಎಡ್ ವಿಭಾಗದ ಪ್ರಾಂಶುಪಾಲ ಮುನಿಶಾಮಪ್ಪ, ಶಾಲೆಯ ಶಿಕ್ಷಕರು ಮತ್ತಿತರರು ಹಾಜರಿದ್ದರು.
ಎನ್.ಅಶೋಕ್, ಡಾಲ್ಫಿನ್ ವಿದ್ಯಾಸಂಸ್ಥೆಯ ನಿರ್ದೇಶಕರು: `ನಮ್ಮ ದೇಶೀ ಸಂಸ್ಕೃತಿ, ಆಚಾರ ವಿಚಾರ, ಜನಜೀವನ, ಜಾನಪದ ಮುಂತಾದ ವಿಚಾರಗಳು ಮಕ್ಕಳ ಮನಸ್ಸಿಗೆ ತಲುಪಲು ಅವರೇ ಅನುಭವಿಸಿ ಪ್ರದರ್ಶಿಸುವ ಉದ್ದೇಶದಿಂದ ಜಾನಪದ ಹಬ್ಬ ಕಾರ್ಯಕ್ರಮ ಶಾಲೆಯಲ್ಲಿ ಆಚರಿಸುತ್ತಿದ್ದೇವೆ. ಮಕ್ಕಳಿಗೆ ಪ್ರೋತ್ಸಾಹ ನೀಡುವ ಉದ್ದೇಶ ಹಾಗು ಮಕ್ಕಳಲ್ಲಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಇಂತಹ ಕಾರ್ಯಕ್ರಮಗಳು ಅನುಕೂಲವಾಗಲಿವೆ.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!