ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಶಿಟೊ ರಿಯೋ ಕರಾಟೆ ಡೊ ಇಂಡಿಯಾ ಅಕಾಡೆಮಿ ವತಿಯಿಂದ ನಡೆದ ಮೂರನೇ ಜಿಲ್ಲಾ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಷಿಪ್ ನಲ್ಲಿ ದಿವ್ಯಭಾರತ್ ಕರಾಟೆ ಡೊ ಅಸೋಸಿಯೇಷನ್ ಕರಾಟೆ ಶಿಕ್ಷಕ ಅರುಣ್ ಕುಮಾರ್ ಮಾತನಾಡಿದರು.
ಕರಾಟೆ ಕೇವಲ ಆತ್ಮರಕ್ಷಣೆಯ ಕಲೆ ಮಾತ್ರವಲ್ಲ, ಅದರಿಂದ ಶಾರೀರಿಕ ಸದೃಢತೆ ಕಾಪಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಸ್ವಯಂ ರಕ್ಷಣೆಗಾಗಿ ಕರಾಟೆ ಕಲಿಯುವುದರಿಂದ ಅತ್ಯಂತ ಹೆಚ್ಚಿನ ದೈಹಿಕ ಶ್ರಮ ಮತ್ತು ಮಾನಸಿಕ ಚಾಕಚಕ್ಯತೆಯನ್ನು ಬಯಸುತ್ತದೆ. ಹಾಗಾಗಿ, ಈ ಕ್ರೀಡೆಯಲ್ಲಿ ಪಾಲ್ಗೊಳ್ಳುವವರು ಹೆಚ್ಚು ವೇಗ ರೂಢಿಸಿಕೊಂಡಿರುತ್ತಾರೆ ಎಂದರು.
ಕಸಾಪ ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿ. ಮನುಷ್ಯನಲ್ಲಿರುವ ಸಂಪತ್ತು ದೋಚಬಹುದು. ಆದರೆ, ಅವನಲ್ಲಿರುವ ವಿದ್ಯೆಯನ್ನು ಕಸಿದುಕೊಳ್ಳಲು ಸಾಧ್ಯ ಇಲ್ಲ. ಹಾಗಾಗಿ ವಿದ್ಯಾರ್ಥಿಗಳು ಅದರಲ್ಲೂ ಹೆಣ್ಣುಮಕ್ಕಳು ಶಿಕ್ಷಣದ ಜೊತೆಯಲ್ಲಿ ದೈಹಿಕ ಆರೋಗ್ಯವನ್ನು ನೀಡುವ ಕರಾಟೆಯಂತಹ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚು ಪಾಲ್ಗೊಳ್ಳಬೇಕೆಂದು ಕಿವಿಮಾತು ಹೇಳಿದರು.
ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ್ದ ಕರಾಟೆ ಪಟುಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದರು.
ಲಯನ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷ ಮುನಿರಾಜು, ಕಲಾವಿದ ಸಿ.ಎನ್.ಮುನಿರಾಜು, ಕರಾಟೆ ಶಿಕ್ಷಕರಾದ ಚಂದ್ರಶೇಖರ್, ನಾಗೇಶ್, ನೂರುಲ್ಲ, ಅಫ್ರೋಸ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







