ನಗರದ ವಾಸವಿ ವಿದ್ಯಾಸಂಸ್ಥೆಯ 67 ವಿದ್ಯಾರ್ಥಿಗಳು ಹೋಬಳಿ ಮತ್ತು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ 40 ವಿದ್ಯಾರ್ಥಿಗಳು ಅರ್ಹತೆಯನ್ನು ಪಡೆದಿದ್ದಾರೆ.
ಶಾಲೆಯ ಕಾರ್ಯದರ್ಶಿ ಬದ್ರಿನಾಥ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆರ್ಯ ವೈಶ್ಯ ಮಂಡಳಿಯಿಂದ ಟ್ರಾಕ್ಸೂಟ್ ಸಮವಸ್ತ್ರವನ್ನು ಉಚಿತವಾಗಿ ವಿತರಿಸಲಾಗುವುದೆಂದು ತಿಳಿಸಿದರು.
ಮುಖ್ಯ ಶಿಕ್ಷಕ ಗೋಪಿನಾಥ್, ಕೆ.ವಿ.ಲಕ್ಷ್ಮೀಪ್ರಸಾದ್, ಸತ್ಯನಾರಾಯಣ ಶೆಟ್ಟಿ, ದೈಹಿಕ ಶಿಕ್ಷಕ ರವಿ, ಅಮರನಾಥ್ ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -