27.1 C
Sidlaghatta
Sunday, February 22, 2026

ಜಿಲ್ಲೆಗೇ ಪ್ರಥಮವಾಗಿ ಜೆ.ವೆಂಕಟಾಪುರ ಸರ್ಕಾರಿ ಶಾಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ

- Advertisement -
- Advertisement -

ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಿಂತ ಕಡಿಮೆಯಿಲ್ಲ ಎಂಬುದನ್ನು ಪೋಷಕರಲ್ಲಿ ಮನಗಾಣಿಸಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಜೆ.ವೆಂಕಟಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಸಿ.ಸಿ.ಕ್ಯಾಮರ ಉದ್ಘಾಟನೆ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಗೇ ಪ್ರಥಮವಾಗಿ ಜೆ.ವೆಂಕಟಾಪುರ ಸರ್ಕಾರಿ ಶಾಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವಿವಿಧ ದಾನಿಗಳು ನೀಡುವ ಹಣವನ್ನು ಶಾಲೆಯ ಶಿಕ್ಷಕರು ಮತ್ತು ಅಭಿವೃದ್ಧಿ ಸಮಿತಿ ಸದಸ್ಯರು ಸದುಪಯೋಗಪಡಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಶಿಕ್ಷಕರು ಗುಣಾತ್ಮಕವಾಗಿ ಭೋದಿಸುವುದರ ಜೊತೆಗೆ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿತಗೊಳಿಸಬೇಕೆಂದು ಶಾಸಕ ಎಂ.ರಾಜಣ್ಣ ಕರೆ ನೀಡಿದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಪಾಪರಾಜು ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿರುವುದು ವಿಷಾಧನೀಯ, ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಬೋದನೆ ಉತ್ತಮವಾಗಿರುತ್ತದೆ. ಮಕ್ಕಳನ್ನು ಶಾಲೆಗೆ ದಾಖಲಿಸಿದ ನಂತರ ಪೋಷಕರು ಶಾಲೆಗಳತ್ತ ಹೋಗುವುದಿಲ್ಲ, ಪೋಷಕರು ಮಕ್ಕಳ ವಿದ್ಯಾಭ್ಯಾಸದ ಪ್ರಗತಿ ಬಗ್ಗೆ ಆಗಾಗ್ಗೆ ವಿಚಾರಿಸುತ್ತಿರಬೇಕು, ಮಕ್ಕಳನ್ನು ಉತ್ತಮ ಪ್ರಜೆಗಳಾಗಿ ರೂಪಿಸುವುದು ಪೋಷಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಮುನಿಯಪ್ಪ, ತನುಜ ರಘು, ನಿರ್ಮಲ ಮುನಿರಾಜು, ತಾಲ್ಲೂಕು ಪಂಚಾಯತಿ ಸದಸ್ಯೆ ಶೋಭ, ವೆಂಕಟಾಪುರ ಪಂಚಾಯತಿ ಅಧ್ಯಕ್ಷ ರಘುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥ ರೆಡ್ಡಿ, ನಿವೃತ್ತ ಶಿಕ್ಷಣಾಧಿಕಾರಿ ಹನುಮಂತಪ್ಪ, ಶಾಲಾ ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!