25.8 C
Sidlaghatta
Monday, January 13, 2025

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಶಿಡ್ಲಘಟ್ಟದಲ್ಲಿ ಟ್ರಾಕ್ಟರ್ ರ್ಯಾಲಿಗೆ ಚಾಲನೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡುವ ಮೂಲಕ ತಾಲ್ಲೂಕು ಜೆಡಿಎಸ್ ಕಾರ್ಯಕರ್ತರು ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಟ್ರಾಕ್ಟರ್ ರ್ಯಾಲಿಯನ್ನು ನವೆಂಬರ್ 15 ರ ಭಾನುವಾರದಂದು ನಡೆಸುವುದಾಗಿ ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ ಹಲವು ದಶಕಗಳಿಂದ ಬಯಲು ಸೀಮೆ ಭಾಗಗಳಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟಗಳಿಗೆ ಸರ್ಕಾರಗಳು ಸೂಕ್ತವಾಗಿ ಸ್ಪಂದಿಸಿಲ್ಲ. ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದ ಬಳಿಯಿರುವ ಚದಲಪುರದ ಬಳಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ನಡೆಸುತ್ತಿರುವ ಹೋರಾಟಕ್ಕೆ ಶಿಡ್ಲಘಟ್ಟದ ಜೆಡಿಎಸ್ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿ, ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸಲಿದ್ದಾರೆ ಎಂದು ಹೇಳಿದರು.
ಕಳೆದ ೫೩ ದಿನಗಳಿಂದ ನೀರಾವರಿ ಹೋರಾಟ ನಡೆಯುತ್ತಿದೆ. ಸರ್ಕಾರ ನೀರಾವರಿ ತಜ್ಞ ಪರಮಶಿವಯ್ಯನವರ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕೆನ್ನುವ ಕೂಗು ಬಯಲುಸೀಮೆ ಭಾಗಗಳ ಜನರದ್ದಾಗಿದೆ. ಆದರೆ ಸರ್ಕಾರ ಎತ್ತಿನಹೊಳೆ ಯೋಜನೆ, ಮೇಕೆದಾಟು ಯೋಜನೆ, ಬೆಂಗಳೂರಿನ ಕೊಳವೆ ನೀರನ್ನು ಸಂಸ್ಕರಣೆ ಮಾಡಿ ಕೆರೆಗಳನ್ನು ತುಂಬಿಸುವುದು ಮುಂತಾದ ಯೋಜನೆಗಳ ಮೂಲಕ ಜನರನ್ನು ಗೊಂದಲಕ್ಕೀಡು ಮಾಡಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಾಗರಿಕರು ಶಾಶ್ವತ ನೀರಾವರಿ ಹೋರಾಟಕ್ಕೆ ಬೆಂಬಲವನ್ನು ನೀಡಿದ್ದಾರೆ. ಅದರಂತೆ ತಾಲ್ಲೂಕಿನ ಜೆಡಿಎಸ್ ಪಕ್ಷದಿಂದಲೂ ಕೂಡಾ ನೀರಾವರಿ ಹೋರಾಟಕ್ಕೆ ಬೆಂಬಲಿಸಿ, ನವೆಂಬರ್ 15 ರ ಭಾನುವಾರದಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಪ್ರಾರಂಭಿಸಲಿದ್ದು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.
ಸುಮಾರು 400 ಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಿಂದ ಆಗಮಿಸಲಿವೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಲಾಗಿದೆ, ನೀರಾವರಿ ಹೋರಾಟಕ್ಕೆ ಬೆಂಬಲ ನೀಡುವಂತಹ ನಾಗರಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಬಹುದಾಗಿದೆ ಎಂದರು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಾ.ಧನಂಜಯರೆಡ್ಡಿ, ಕೋಚಿಮುಲ್ ನಿರ್ದೇಶಕ ಬಂಕ್ಮುನಿಯಪ್ಪ, ಡಿ.ಸಿ.ಸಿ.ಬ್ಯಾಂಕ್ನಿರ್ದೇಶಕ ಪಿ.ಶಿವಾರೆಡ್ಡಿ, ನಗರಸಭಾ ಸದಸ್ಯ ಅಪ್ಸರ್ಪಾಷಾ, ರಮೇಶ್, ಕೆ.ಎಸ್.ಕನಕಪ್ರಸಾದ್, ಸುರೇಂದ್ರ, ಜೆಡಿಎಸ್ ಕಾರ್ಮಿಕ ಘಟಕದ ಅಧ್ಯಕ್ಷ ರಹಮತ್ತುಲ್ಲಾ ಮತ್ತಿತರರು ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!