ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯತಿಯ ಚೌಡರೆಡ್ಡಿಹಳ್ಳಿ ಗ್ರಾಮದ ವೆಂಕಟಮ್ಮ(55) ಎಂಬುವವರು ಮಂಗಳವಾರ ಸಂಜೆ ಜೇನು ಹುಳುಗಳು ಕಚ್ಚಿದ್ದರಿಂದ ಮೃತಪಟ್ಟಿದ್ದಾರೆ.
ತಮ್ಮ ಹೊಲದ ಬಳಿ ಹೋಗುತ್ತಿದ್ದ ವೆಂಕಟಮ್ಮ ಜೇನಿನ ಧಾಳಿಗೆ ತುತ್ತಾಗಿದ್ದಾರೆ. ತಕ್ಷಣ ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಅದೇ ಸಂದರ್ಭದಲ್ಲಿ ಕುರಿ ಮೇಯಿಸಲು ಹೋಗಿದ್ದ ಸದ್ದಹಳ್ಳಿಯ ಬೈರಪ್ಪ ಮತ್ತು ಬೇಬಿ ಎಂಬುವವರೂ ಜೇನಿನ ಕಡಿತಕ್ಕೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -