ಟಿಪ್ಪು ಭವನಕ್ಕಾಗಿ ಸ್ಥಳ ಮಂಜೂರಾತಿಗಾಗಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಅತ್ಯಂತ ಶೀಘ್ರವಾಗಿ ಸ್ಥಳ ಮಂಜೂರಾತಿ ಆಗಲಿದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಾಡಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಗರದ ತಾಲ್ಲೂಕು ಕಚೇರಿಯ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಟಿಪ್ಪು ಸುಲ್ತಾನ್ ದೂರದರ್ಶಿತ್ವದಿಂದ ಜಿಲ್ಲೆಗೆ ರೇಷ್ಮೆ ಬಂದಿತು. ಟಿಪ್ಪು ತನ್ನ ಆಡಳಿತಾವಧಿಯಲ್ಲಿ ಚೀನಾ ದೇಶದಿಂದ ತರಿಸಿದ ರೇಷ್ಮೆ ಬೆಳೆಯಿಂದಾಗಿ ಇಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರ ಜೀವನ ಹಸನಾಗಿದೆ. ರೇಷ್ಮೆಯಿಂದಲೇ ಖ್ಯಾತಿ ಪಡೆದಿರುವ ತಾಲ್ಲೂಕಿನ ಜನರು ಈ ಕಾರಣದಿಂದ ಟಿಪ್ಪುವಿನ ಬಗ್ಗೆ ಗೌರವ ಭಾವನೆಯನ್ನು ಹೊಂದಿರುವರು ಎಂದು ಹೇಳಿದರು.
ಸರ್ಕಾರದ ನಿರ್ದೇಶನದಂತೆ ಅತ್ಯಂತ ಸರಳವಾಗಿ ಟಿಪ್ಪು ಸುಲ್ತಾನ್ ಜಯಂತ್ಯುತ್ಸವವನ್ನು ಈ ಬಾರಿ ನಡೆಸಲಾಗುತ್ತಿದೆ. ಮುಂದಿನ ವರ್ಷ ಅದ್ದೂರಿಯಾಗಿ ಎಲ್ಲರೂ ಒಗ್ಗೂಡಿ ಆಚರಿಸೋಣ ಎಂದು ನುಡಿದರು.
ನಗರಸಭಾ ಸದಸ್ಯ ಅಫ್ಸರ್ ಪಾಷ ಮಾತನಾಡಿ, ಹಿರಿಯರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿತ್ತು. ಆದರೆ ಕಡಿಮೆ ಸಮಯದಲ್ಲಿ ಸರಳವಾಗಿ ಕಾರ್ಯಕ್ರಮ ನಡೆಸಬೇಕಿದ್ದರಿಂದ ಇದೆಲ್ಲ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಮುಖ್ಯ ಭಾಷಣಕಾರ ಉಪನ್ಯಾಸಕ ಮುನಿರೆಡ್ಡಿ ಟಿಪ್ಪು ಸುಲ್ತಾನ್ ಜೀವನ ಸಾಧನೆಯನ್ನು ವಿವರಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ಗ್ರೇಡ್ 2 ತಹಶೀಲ್ದಾರ್ ಮುನಿಕೃಷ್ಣಪ್ಪ, ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್, ಆಯುಕ್ತ ಚಲಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಬಾಬು, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಸರ್ಕಲ್ ಇನ್ಸ್ ಪೆಕ್ಟರ್ ಸಿದ್ದರಾಜು, ಸಿಕಂದರ್, ರೆಹಮಾನ್, ತಾಜ್ ಪಾಷ, ಮಹಮ್ಮದ್ ಅಲಿ, ಹೈದರಾಲಿ, ನವಾಜ್ ಖಾನ್, ಮುಸ್ಟಾಕ್ ಅಹಮದ್, ಮನ್ಸೂರ್ ಅಹಮದ್, ಅಮೀರ್ ಜಾನ್, ಮೌಲಾ, ಅಬ್ದುಲ್ ಅಹಮದ್, ನವಾಜ್ ಖಾನ್, ಬಾಬಾ, ಮಹಮ್ಮದ್ ಅಮೀರ್ ಹಾಜರಿದ್ದರು.
- Advertisement -
- Advertisement -
- Advertisement -