Home News ಟಿವಿ ಮುಂದೆ ಕುಳಿತುಕೊಂಡು ಮಕ್ಕಳು ಕ್ರಿಯಾಶೀಲತೆಯನ್ನು ಕಳೆದುಕೊಳ್ಳುತ್ತಿದ್ದಾರೆ

ಟಿವಿ ಮುಂದೆ ಕುಳಿತುಕೊಂಡು ಮಕ್ಕಳು ಕ್ರಿಯಾಶೀಲತೆಯನ್ನು ಕಳೆದುಕೊಳ್ಳುತ್ತಿದ್ದಾರೆ

0

ರಜೆ ಬಂದರೆ ಹಿಂದೆ ಮಕ್ಕಳು ವಿವಿಧ ಆಟೋಟಗಳು, ಬಾವಿಗಳಲ್ಲಿ ಈಜು ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ ಈಗ ಕೇವಲ ಟಿವಿ ಮುಂದೆ ಕುಳಿತುಕೊಂಡು ತಮ್ಮ ಕ್ರಿಯಾಶೀಲತೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯ ಶಿಕ್ಷಕ ಎನ್.ಕೃಷ್ಣಮೂರ್ತಿ ತಿಳಿಸಿದರು.
ನಗರದ ಚಿಂತಾಮಣಿ ರಸ್ತೆಯಲ್ಲಿರುವ ಉಲ್ಲೂರುಪೇಟೆ ಸರ್ಕಾರಿ ಶಾಲೆಯ ಆವರಣದಲ್ಲಿ ಗುರುವಾರ ದಿವ್ಯ ಭಾರತ್ ಕರಾಟೆ ಡೋ ಅಸೋಸಿಯೇಷನ್ ವತಿಯಿಂದ ನಡೆದ ಉಚಿತ ಕರಾಟೆ, ಜಿಮ್ನಾಸ್ಟಿಕ್, ಯೋಗ, ನೃತ್ಯ ಮುಂತಾದವುಗಳನ್ನು ಕಲಿಸುವ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇವಲ ಪುಸ್ತಕ ಓದಿನಲ್ಲಿ ತಲ್ಲೀನರಾದರೆ ಸಾಲದು ಮಕ್ಕಳು ದೈಹಿಕವಾಗಿಯೂ ಸದೃಢರಾಗಬೇಕು. ಅದಕ್ಕೆ ಸೂಕ್ತ ಮಾರ್ಗದರ್ಶನ ಅಗತ್ಯ. ಉಚಿತವಾಗಿ ನಡೆಸುವ ಬೇಸಿಗೆ ಶಿಬಿರವನ್ನು ಮಕ್ಕಳು ಸದುಪಯೋಗ ಮಾಡಿಕೊಳ್ಳಬೇಕು. ಪೋಷಕರು ಮಕ್ಕಳಿಗೆ ಪ್ರೋತ್ಸಾಹಿಸುವಂತೆ ಅವರು ಕೋರಿದರು.
ಲಯನ್ ಕ್ರೀಡಾ ಸಂಸ್ಥೆಯ ಗೌರವಾಧ್ಯಕ್ಷ ಮುನಿರಾಜು ಮಾತನಾಡಿ, ಎಳೆಯ ವಯಸ್ಸಿನಲ್ಲಿಯೇ ಮಕ್ಕಳಿಗೆ ಕ್ರೀಡೆಯಲ್ಲಿ ಪ್ರೋತ್ಸಾಹಿಸುವ ಮೂಲಕ ಅವರ ಪ್ರತಿಭೆಯನ್ನು ಗುರುತಿಸಬೇಕು. ರಾಜ್ಯಮಟ್ಟ, ರಾಷ್ಟ್ರಮಟ್ಟದಲ್ಲಿ ಅವರು ಪ್ರತಿನಿಧಿಸುವಂತಾದಾಗ ತಾಲ್ಲೂಕಿಗೇ ಕೀರ್ತಿ ಬರುತ್ತದೆ ಎಂದು ಹೇಳಿದರು.
ದಿವ್ಯ ಭಾರತ್ ಕರಾಟೆ ಡೋ ಅಸೋಸಿಯೇಷನ್ ಶಿಕ್ಷಕ ವಿ.ಅರುಣ್ಕುಮಾರ್ ಮಾತನಾಡಿ, ಪ್ರತಿ ದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಶಿಬಿರವನ್ನು ನಡೆಸಲಾಗುತ್ತದೆ. ಹತ್ತು ದಿನಗಳ ಕಾಲ ನಡೆಯುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಕಲಿತದ್ದನ್ನು ಪ್ರದರ್ಶಿಸುವರು ಎಂದರು.
ರಂಗಕರ್ಮಿ ಮುನಿರಾಜು, ಶಿಕ್ಷಕರಾದ ದಾಕ್ಷಾಯಿಣಿ, ಚಂದ್ರಕಲಾ ಹಾಜರಿದ್ದರು.