ಡಾ.ಎಸ್‌.ರಾಧಾಕೃಷ್ಣನ್‌ರವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

0
531

ತಾಲ್ಲೂಕಿನ ಹಂಡಿಗನಾಳದ ಕೆ.ವಿ.ಭವನದಲ್ಲಿ ಬುಧವಾರ ತಾಲ್ಲೂಕು ಆಡಳಿತ, ತಾಲ್ಲುಕು ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಭಾರತರತ್ನ ಡಾ.ಎಸ್‌.ರಾಧಾಕೃಷ್ಣನ್‌ರವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಸರ್ಕಾರವು ಶಿಕ್ಷಣಕ್ಕೆ ಹೆಚ್ಚು ಹಣವನ್ನು ಖರ್ಚು ಮಾಡುತ್ತಿದೆ. ಗುಣಮಟ್ಟದ ಶಿಕ್ಷಣವನ್ನು ನೀಡುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅವರು ತಿಳಿಸಿದರು.
ಖಾಸಗಿ ಶಾಲೆಗಳ ಮಕ್ಕಳು ಉತ್ತಮ ಅಂಕಗಳನ್ನು ಗಳಿಸಿದರೆ, ಸರ್ಕಾರಿ ಸವಲತ್ತುಗಳನ್ನು ಪಡೆಯುವ ಸರ್ಕಾರಿ ಶಾಲೆಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಾಧನೆಗಳಾಗದಿರುವ ಕೊರತೆಯಿದೆ. ವೃತ್ತಿಧರ್ಮಕ್ಕೆ ಚ್ಯುತಿ ಬರದಂತೆ ಶಿಕ್ಷಕರು ಕಾರ್ಯನಿರ್ವಹಿಸಬೇಕು. ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಕೆಲಸ ಮಾಡಿ ಒಳ್ಳೆಯ ಫಲಿತಾಂಶ ಪಡೆದು ತಾಲ್ಲೂಕಿನ ಕೀರ್ತಿ ಹೆಚ್ಚಿಸಿ. ಎಂದರು.
ತಹಶೀಲ್ದಾರ್‌ ಅಜಿತ್‌ಕುಮಾರ್‌ ರೈ ಮಾತನಾಡಿ, ಶಿಕ್ಷಕರು ಸಮಾಜವನ್ನು ಕಟ್ಟುವ ಜವಾಬ್ದಾರಿಯನ್ನು ಹೊತ್ತವರು. ಮಕ್ಕಳ ಭವಿಷ್ಯವನ್ನು ರೂಪಿಸುವವರು. ಮಕ್ಕಳಲ್ಲಿ ಭವಿಷ್ಯದ ಕನಸುಗಳನ್ನು ಬಿತ್ತಿ. ಅವಕಾಶಗಳ ದಾರಿ ತೋರಿಸಿಕೊಡಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿವೃತ್ತರಾಗಿರುವ 21 ಮಂದಿ ಶಿಕ್ಷಕರನ್ನು, ಜಿಲ್ಲಾ ಪ್ರಶಸ್ತಿ ಪಡೆದ ಮೂವರು ಶಿಕ್ಷಕರನ್ನು ಹಾಗೂ ಖಾಸಗಿ ಅನುದಾನ ರಹಿತ ಶಾಲೆಯ ಇಬ್ಬರು ಶಿಕ್ಷಕರನ್ನು ಗೌರವಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಮುನಿಯಪ್ಪ, ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯ ಜಯರಾಮ್‌, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರಬಾಬು, ಶಿಕ್ಷಕರಾದ ಬೈರಾರೆಡ್ಡಿ, ಕೆಂಪಣ್ಣ ಹಾಜರಿದ್ದರು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!