24.1 C
Sidlaghatta
Wednesday, November 12, 2025

ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಆಚರಣೆ

- Advertisement -
- Advertisement -

ವಿಶ್ವದಲ್ಲೇ ಶ್ರೇಷ್ಠ ಲಿಖಿತ ಸಂವಿಧಾನವನ್ನು ನೀಡಿರುವ ಅಂಬೇಡ್ಕರ್ ಅವರ ಆಶಯಗಳು ಇನ್ನೂ ಜಾರಿಗೊಳ್ಳದಿರುವುದು ದುರಂತ ಎಂದು ನಿವೃತ್ತ ಶಿಕ್ಷಣ ಸಂಯೋಜಕ ತಲದುಮ್ಮನಹಳ್ಳಿ ಆರ್.ಕೃಷ್ಣಪ್ಪ ವಿಷಾಧಿಸಿದರು.
ಪಟ್ಟಣದ ಕೋಟೆ ವೃತ್ತದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದ ಸರ್ಕಾರಿ ನೌಕರರು ಶನಿವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಅವರು ಮಾತನಾಡಿದರು.
ದಲಿತ ಜನಾಂಗದವರು ಇಂದಿಗೂ ಶೋಷಣೆಗೆ ಒಳಗಾಗುತ್ತಿರುವುದರೊಂದಿಗೆ ಅಸ್ಪೃಶ್ಯತೆಗೂ ಈಡಾಗುತ್ತಿದ್ದಾರೆ. ಈ ಜನಾಂಗ ಶಿಕ್ಷಣ ಪಡೆದು, ಸಂಘಟಿತರಾಗಿ ಹೋರಾಟ ಮಾಡಿದಾಗ ಮಾತ್ರ ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪುರಸಭಾ ಸದಸ್ಯ ವೆಂಕಟಸ್ವಾಮಿ, ನರಸಿಂಹಯ್ಯ, ಎಂ.ಮಂಜುನಾಥ್, ವಿಜಯಕುಮಾರ್, ಎ.ವಿ.ವೆಂಕಟನರಸಪ್ಪ, ಮುನಿಯಪ್ಪ, ಗುರುರಾಜ್, ಲಕ್ಷ್ಮೀದೇವಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!