‘ಡಿ.ಕೆ.ರವಿ ಅವರ ಈ ಸಾವು ನ್ಯಾಯವೇ?’, ‘ಭೂ ಮಾಫಿಯಾಗೆ ಧಿಕ್ಕಾರ. ಉತ್ತಮ ಅಧಿಕಾರಿಗಳಿಗೆ ರಕ್ಷಣೆ ನೀಡದ ಭ್ರಷ್ಟ ಸರ್ಕಾರಕ್ಕೆ ಧಿಕ್ಕಾರ’ ಎಂದು ಘೋಷಣೆಗಳನ್ನು ಕೂಗುತ್ತಾ ಒಂದೆಡೆ ರೇಷ್ಮೆ ಗೂಡು ಮಾರುಕಟ್ಟೆಯ ಬಳಿಯಿಂದ ರೈತ ಮುಖಂಡರು ಮೆರವಣಿಗೆ ನಡೆಸಿದರು. ಮತ್ತೊಂದೆಡೆ ಎಸ್.ಎಫ್.ಐ ನೇತೃತ್ವದಲ್ಲಿ ಐ.ಟಿ.ಐ ಕಾಲೇಜಿನ ವಿದ್ಯಾರ್ಥಿಗಳು ಕೂಡ ಡಿ.ಕೆ.ರವಿ ಅವರ ಈ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.
ರೈತಮುಖಂಡರು ತಹಶಿಲ್ದಾರ್ ಕಚೇರಿಯ ಅಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು. ಅಬ್ಲೂಡು ಆರ್.ದೇವರಾಜ್, ಭಕ್ತರಹಳ್ಳಿ ಬೈರೇಗೌಡ, ತ್ಯಾಗರಾಜ್, ರಾಮಚಂದ್ರ, ಚಿಕ್ಕಮಾರಪ್ಪ, ಅಂಬರೀಷ್, ಶ್ರೀನಿವಾಸ್, ಗೋವಿಂದಪ್ಪ, ರಾಜಗೋಪಾಲ್, ಎಸ್.ಎಫ್.ಐ ಮುಖಂಡ ಮುನೀಂದ್ರ, ನರಸಿಂಹಮೂರ್ತಿ, ಆನಂದಕುಮಾರ್, ನವೀನ್, ರಾಜೇಶ್, ಭರತ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -