Home News ಡಿ.ಕೆ.ರವಿ ಸಾವಿನ ತನಿಖೆ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಡಿ.ಕೆ.ರವಿ ಸಾವಿನ ತನಿಖೆ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

0

ದಕ್ಷ ಪ್ರಾಮಾಣಿಕ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ಬುಧವಾರ ನಗರದ ಬಸ್ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಕೋಲಾರದ ಜಿಲ್ಲಾಧಿಕಾರಿಗಳಾಗಿ ಸಮಾಜದ ಹಿತೈಶಿಯಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಸಮಾಜಘಾತುಕ ಶಕ್ತಿಗಳಿಗೆ ಸಿಂಹಸ್ವಪ್ನರಾಗಿದ್ದ ಡಿ.ಕೆ.ರವಿ ಅವರ ಸಾವು, ಕೊಲೆಯೋ, ಆತ್ಮಹತ್ಯೆಯೋ ತಿಳಿಯದೇ ರಾಜ್ಯದ ಜನತೆ ತಲ್ಲಣಗೊಂಡಿದ್ದಾರೆ. ಒಬ್ಬ ಐಎಎಸ್ ಅಧಿಕಾರಿಗೆ ರಕ್ಷಣೆ ಇಲ್ಲದಿದ್ದ ಮೇಲೆ ಜನಸಾಮಾನ್ಯರ ಗತಿಯೇನು. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಶೀಘ್ರ ತನಿಖೆ ನಡೆಸಿ ಅಪರಾಧಿಗಳನ್ನು ಶಿಕ್ಷಿಸಬೇಕೆಂದು ಆಗ್ರಹಿಸಿದರು.
ಭಕ್ತರಹಳ್ಳಿ ಬೈರೇಗೌಡ, ಎ.ಎಸ್.ಚಂದ್ರೇಗೌಡ, ಬಿ.ನಾರಾಯಣಸ್ವಾಮಿ, ಕೆ.ವಿ.ವೇಣುಗೋಪಾಲ್, ಎಸ್.ಎಂ.ನಾರಾಯಣಸ್ವಾಮಿ, ತ್ಯಾಗರಾಜ್, ಅಂಬರೀಷ್, ಸುರೇಶ್, ದೇವರಾಜ್, ರಘು, ಅನಂತ್, ಶಂಕರ್, ವೆಂಕಟೇಶ್, ಅಶ್ವತ್ಥಪ್ಪ, ರವಿ, ಗಂಗಾಧರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.