ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಎ.ಪಿ.ಎಂ.ಸಿ ನಿರ್ದೇಶಕ ದೊಗರನಾಯಕನಹಳ್ಳಿ ಡಿ.ವಿ.ವೆಂಕಟೇಶಪ್ಪ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಆಕಾಂಕ್ಷಿಯಾಗಿರುವುದಾಗಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಕ್ಷೇತ್ರದಾದ್ಯಂತ ಹಲವಾರು ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದು, ಸಾಮಾಜಿಕ ಸೇವೆಯಲ್ಲೂ ತೊಡಗಿಸಿಕೊಂಡಿದ್ದೇನೆ. ಅಸಂಘಟಿತ ಕಾರ್ಮಿಕರಿಗೆ, ಅಲ್ಪಸಂಖ್ಯಾತರಿಗೆ, ವಿದ್ಯಾರ್ಥಿಗಳಿಗೆ, ದಲಿತರಿಗೆ, ಸಾಮಾನ್ಯ ನಾಗರಿಕರಿಗೆ, ಎಲ್ಲಾ ವರ್ಗದ ಜನರಿಗೆ ಅವಶ್ಯವಿರುವ ಸೌಲಭ್ಯವನ್ನು ನೀಡಿರುತ್ತೇನೆ. ಆದುದರಿಂದ 2018 ರ ವಿಧಾನಸಭೆ ಚುನಾವಣೆಯಲ್ಲಿ ಶಿಡ್ಲಘಟ್ಟ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷಿಯಾಗಿರುತ್ತೇನೆ ಎಂದು ತಿಳಿಸಿದ್ದಾರೆ.