ಗ್ರಾಮ ಪಂಚಾಯಿತಿಗಳಲ್ಲಿ ಹೊಸದಾಗಿ ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕಾತಿಗೆ ಸರ್ಕಾರ ನೀಡಿರುವ ಆದೇಶದಿಂದ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಡೇಟಾ ಎಂಟ್ರಿ ಆಪರೇಟರ್ ಗಳಿಗೆ ಅನ್ಯಾಯವಾಗುತ್ತದೆ. ಅದನ್ನು ಸರಿಪಡಿಸಿ ಎಂದು ಮಂಗಳವಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್ ಅವರಿಗೆ ತಾಲ್ಲೂಕಿನ ಡೇಟಾ ಎಂಟ್ರಿ ಆಪರೇಟರ್ ಸಂಘದ ಸದಸ್ಯರು ಮನವಿ ಸಲ್ಲಿಸಿದರು.
ಸರ್ಕಾರದ ಆದೇಶದಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಹೊಸದಾಗಿ ಒಂದು ಡೇಟಾ ಎಂಟ್ರಿ ಆಪರೇಟರ್ ಹುದ್ದೆ ಸೃಜಿಸಿ ನೇಮಕಾತಿ ವಿಧಾನವನ್ನು ನಿರ್ದಿಷ್ಟಪಡಿಸಲಾಗಿದೆ. ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಈಗ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್ ಹಾಗೂ ಡೇಟಾ ಎಂಟ್ರಿ ಆಪರೇಟರ್ ಗಳಿಗೆ ಆದ್ಯತೆ ನೀಡದೆ ಅವರು ಸಲ್ಲಿಸಿರುವ ಸೇವೆಗೆ ಪ್ರತಿ ವರ್ಷ ಹೆಚ್ಚುವರಿ 3 ಅಂಕ ನೀಡುವುದರಿಂದ ಈಗಿನ ಅಭ್ಯರ್ಥಿಗಳ ಜೊತೆ ಸ್ಪರ್ಧಿಸಲು ಸಾಧ್ಯವಾಗದಾಗಿದೆ. ಇದರಿಂದ ಇದನ್ನೇ ನಂಬಿದ ನಮಗೆ ಅನ್ಯಾಯವಾಗುತ್ತದೆ.
ಈಗ ಕಾರ್ಯನಿರ್ವಹಿಸುತ್ತಿರುವ ಡೇಟಾ ಎಂಟ್ರಿ ಆಪರೇಟರ್ ಗಳು ಕನಿಷ್ಠ ವೇತನವನ್ನೂ ಪಡೆಯದೆ ದೈನಂದಿನ ಕಚೇರಿ ಕೆಲಸಗಳಲ್ಲಿ ಮೇಲಧಿಕಾರಿಗಳ ಆದೇಶದಂತೆ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿ ಕೆಲಸದ ಅನುಭವ ಹೊಂದಿರುವ ಇವರಿಗೆ ಈ ನೇಮಕಾತಿಯಲ್ಲಿ ಪ್ರಥಮ ಆದ್ಯತೆ ನೀಡಿ ಡೇಟಾ ಎಂಟ್ರಿ ಆಪರೇಟರ್ ಗಳಿಗೆ ನ್ಯಾಯ ಒದಗಿಸಬೇಕೆಂದು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ಮನವಿಯನ್ನು ಮೇಲಧಿಕಾರಿಗಳಿಗೆ ಕಳುಹಿಸುವುದಾಗಿ ಹೇಳಿದರು.
ಡೇಟಾ ಎಂಟ್ರಿ ಆಪರೇಟರ್ ಗಳ ತಾಲ್ಲೂಕು ಸಂಘದ ಅಧ್ಯಕ್ಷ ಎಸ್.ಪ್ರಸನ್ನಕುಮಾರ್, ಉಪಾಧ್ಯಕ್ಷೆ ವಿ.ಸುಗುಣ, ಖಜಾಂಚಿ ಸಿ.ಮುರಳಿ, ಕಾರ್ಯದರ್ಶಿ ಎಚ್.ಸಿ.ದ್ಯಾವಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -