20.1 C
Sidlaghatta
Friday, November 7, 2025

ತಾದೂರು ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

- Advertisement -
- Advertisement -

ತಾಲ್ಲೂಕಿನ ತಾದೂರು ಗ್ರಾಮದ ವಿನಾಯಕ ಯುವಕರ ಬಳಗದ ವತಿಯಿಂದ ಬುಧವಾರ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡಿದರು.
ಧ್ವಜಾರೋಹಣ ಮಾಡಿ ಮಾತನಾಡಿದ ಶಾಸಕ ಎಂ.ರಾಜಣ್ಣ, ‘ಕನ್ನಡ ನಾಡು, ನುಡಿಯನ್ನು ಉಳಿಸುವ ನಿಟ್ಟಿನಲ್ಲಿ ಯುವಜನತೆ ಒಗ್ಗಟ್ಟಾಗಬೇಕು. ನಮ್ಮ ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯವನ್ನು ಉಳಿಸಿ ಬೆಳೆಸುವಂತಹ ಕಾರ್ಯಗಳಾಗಬೇಕು. ರಾಜ್ಯೋತ್ಸವ ಸಮಾರಂಭಗಳು ಕೇವಲ ನವೆಂಬರ್ ತಿಂಗಳಿಗೆ ಸೀಮಿತವಾಗಬಾರದು. ವರ್ಷದುದ್ದಕ್ಕೂ ನಮ್ಮ ನಡವಳಿಕೆಯ ಮೂಲಕ ನಡೆಯುವಂತಾಗಬೇಕು, ರಾಜ್ಯದ ಪ್ರತಿಯೊಂದು ಗ್ರಾಮದ ಮನೆ ಮನೆಯಲ್ಲಿಯೂ ಕನ್ನಡ ಹಬ್ಬದ ವಾತಾವರಣ ಮೂಡಬೇಕು’ ಎಂದು ಹೇಳಿದರು.
ಗ್ರಾಮದಲ್ಲಿ ರಾಜ್ಯೋತ್ಸವದ ಅಂಗವಾಗಿ ಯುವಕ ಬಳಗದಿಂದ ಉಚಿತ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
ರಮೇಶ್, ಗ್ರಾಮ ಪಂಚಾಯತಿ ಸದಸ್ಯ ಬಿ.ರಘು, ಟಿ.ಎಂ.ಪ್ರಭಾಕರ್, ಡಿ.ಮಂಜುನಾಥ್, ಕೆ.ಮುರಳಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಟಿ.ವಿ.ವೇಣುಗೋಪಾಲ್, ರಾಮಾಂಜಿನಪ್ಪ, ಎಸ್.ಎಂ.ನವೀನ್‌ಕುಮಾರ್, ಮುನೇಗೌಡ, ಸಂಪತ್‌ಕುಮಾರ್, ಎಂ.ಗಜೇಂದ್ರ, ಪ್ರಮೋದ್, ಮಧುಕರ್, ಗಂಗರೆಡ್ಡಿ, ಮೂರ್ತಿ, ನರಸಿಂಹಮೂರ್ತಿ, ನಾರಾಯಣಸ್ವಾಮಿ, ನಟರಾಜ್ ಮುಂತಾದವರು ಈ ಸಂದರ್ಭದಲ್ಲಿಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!