ಮುಂಗಾರು ಮಳೆ ಕೈಕೊಟ್ಟಿದ್ದು ರೈತರ ಬೆಳೆಗಳು ಒಣಗಿಹೋಗಿರುವ ಕಾರಣ ಶಿಡ್ಲಘಟ್ಟ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘದವರು ಉಪತಹಶೀಲ್ದಾರ್ ವಾಸುದೇವಮೂರ್ತಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ತಾಲ್ಲೂಕಿನಲ್ಲಿ ರೈತರು ಮಳೆ ಆಶ್ರಿತ ಜಮೀನುಗಳಲ್ಲಿ ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣ ಒಣಗಿ ಹೋಗಿವೆ. ರೈತರು ಕಂಗಾಲಾಗಿದ್ದಾರೆ. ಸರ್ಕಾರ ಕೂಡಲೇ ಈ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಬೆಳೆ ನಷ್ಟ ಪರಿಹಾರ ಮಾಡಬೇಕು.
ರಾಷ್ಟ್ರೀಕೃತ ಸಹಕಾರ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಬೆಳೆಗಳ ನಾಶದಿಂದ ಜಾನುವಾರುಗಳಿಗೆ ಮೇವಿಲ್ಲದ ಕಾರಣ ಸರ್ಕಾರದಿಂದ ಮೇವು ವಿತರಣೆ ಮಾಡಬೇಕು.
ರೈತರು ತಮ್ಮ ಕೆಲಸಗಳಿಗಾಗಿ ತಾಲ್ಲೂಕು ಕಚೇರಿಗೆ ಬಂದರೆ ರೈತರ ಕೆಲಸವನ್ನು ವಿನಾ ಕಾರಣ ಅಲೆದಾಡುವಂತೆ ಅಧಿಕಾರಿಗಳು ಮಾಡುತ್ತಿದ್ದು, ಅವರ ವಿರುದ್ದ ಕ್ರಮ ಕೈಕೊಳ್ಳಬೇಕು. ತಕ್ಷಣವೇ ಅನ್ನದಾತರ ಬೇಡಿಕೆಗಳನ್ನು ಈಡೆರಿಸಬೇಕೆಂದು ಒತ್ತಾಯಿಸಿದರು.
ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ವೆಂಕಟಸ್ವಾಮಿ, ತಾಲ್ಲೂಕು ಗೌರವಾಧ್ಯಕ್ಷ ಮುನಿಕೆಂಪಣ್ಣ, ಅಧಯಕ್ಷ ರವಿಪ್ರಕಾಶ್, ಪ್ರತೀಶ್, ಮಾರಪ್ಪ. ಗೋವಿಂದಪ್ಪ, ಶಿವಕುಮಾರ್, ಪುರುಷೋತ್ತಮ್, ಶಂಕರ್, ಮುನಿನಾರಾಯಣ, ರಮೇಶ್, ಮುನಿರಾಜು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -