ತಾಲ್ಲೂಕಿನ ಶೀಗೇಹಳ್ಳಿ ಗ್ರಾಮದ ಎನ್.ಶ್ಯಾಮಲ ಅವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ತಾಲ್ಲೂಕು ಮಟ್ಟದ ಪ್ರಗತಿಶೀಲ ಯುವ ರೈತ ಮಹಿಳೆ ಪ್ರಶಸ್ತಿಯನ್ನು ನೀಡಿದ್ದಾರೆ.
ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕೃಷಿ ಮೇಳದಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಮತ್ತು ಅನಂತಕುಮಾರ್, ವಿಧಾನಪರಿಷತ್ ಸದಸ್ಯ ರಾಮಚಂದ್ರಗೌಡ ಪ್ರಶಸ್ತಿ ಮತ್ತು ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.
ಸಾವಯವ ಕೃಷಿಯಲ್ಲಿ ರೇಷ್ಮೆ , ರಾಗಿ, ಅವರೆ, ಜೋಳ, ತರಕಾರಿ ಬೆಳೆಗಳನ್ನು ಬೆಳೆಯುತ್ತಿರುವ ಶೀಗೇಹಳ್ಳಿ ಗ್ರಾಮದ ಎನ್.ಶ್ಯಾಮಲ, ಹಸು, ಎಮ್ಮೆ, ಕುರಿ, ಕೋಳಿ ಮುಂತಾದ ಪ್ರಾಣಿಗಳನ್ನೂ ಸಾಕಿದ್ದಾರೆ. ತ್ಯಾಜ್ಯದಿಂದ ಎಳೆಹುಳು ಗೊಬ್ಬರವನ್ನು ತಯಾರಿಸುತ್ತಾರೆ. ಗೋಬರ್ ಗ್ಯಾಸ್ನಿಂದ ಅಡುಗೆ ಮಾಡುತ್ತಾರೆ. ಕೃಷಿ ಮೇಳ, ಬೆಳೆ ಕ್ಷೇತ್ರೋತ್ಸವ, ಪ್ರಗತಿಪರ ರೈತರ ತೋಟಗಳಿಗೆ ಭೇಟಿ ನೀಡಿ ಪಡೆದ ಜ್ಞಾನವನ್ನು ಅಳವಡಿಸಿಕೊಂಡು ಆರ್ಥಿಕ ಪ್ರಗತಿಯನ್ನು ಕಂಡುಕೊಂಡಿದ್ದಾರೆ.
- Advertisement -
- Advertisement -
- Advertisement -
- Advertisement -