ತಾಲ್ಲೂಕಿನ ಚೌಡಸಂದ್ರದ ಸ್ವಾತಂತ್ರ್ಯ ಹೋರಾಟಗಾರ ನಾರಾಯಣಪ್ಪ(95) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಮೃತರು ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹುಟ್ಟೂರು ಚೌಡಸಂದ್ರದಲ್ಲಿ ಬುಧವಾರ ಮೃತರ ಅಂತ್ಯ ಸಂಸ್ಕಾರ ನಡೆಯಿತು. ಚೌಡಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ನಾರಾಯಣಪ್ಪ ಅವರು ಸೇವೆ ಸಲ್ಲಿಸಿದ್ದರು.
ತಾಲ್ಲೂಕು ಆಡಳಿತದ ಪರವಾಗಿ ಕಂದಾಯ ಇಲಾಖೆಯ ಅಧಿಕಾರಿಗಳು ಮೃತರಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು. ಮಾಜಿ ಸಚಿವ ವಿ.ಮುನಿಯಪ್ಪ, ಜಿಲ್ಲಾ ಪಂಚಾಯತಿ ಸದಸ್ಯ ಸತೀಶ್, ಮೇಲೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು.
ಅಪಾರ ಬಂಧು ಬಳಗ, ಅಭಿಮಾನಿಗಳ ಸಾಕ್ಷಿಯಲ್ಲಿ ಅಂತಿಮ ಸಂಸ್ಕಾರದ ವಿದಿವಿಧಾನಗಳನ್ನು ಪೂರೈಸಲಾಯಿತು.
ನಾರಾಯಣಪ್ಪರವರ ಸ್ವಾತಂತ್ರ ಹೋರಾಟದ ನೆನಪುಗಳನ್ನು ಇಲ್ಲಿ ಓದಬಹುದು
http://www.sidlaghatta.com/?p=1483
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -