ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮ

- Advertisement -
- Advertisement -

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ತಹಶೀಲ್ದಾರ್ ಎಸ್.ಅಜಿತ್‌ಕುಮಾರ್ ರೈ ಮಾತನಾಡಿದರು.
ಬೆಳಗಾವಿಯಲ್ಲಿನ ಕಿತ್ತೂರು ಸಂಸ್ಥಾನವನ್ನಾಳಿದ ವೀರ ಮಹಿಳೆ ಚೆನ್ನಮ್ಮಾಜಿ ತನ್ನ ಪುಟ್ಟ ರಾಜ್ಯ ಕಿತ್ತೂರಿನ ರಕ್ಷಣೆಗಾಗಿ ಬಹುತೇಕ ಭಾರತವನ್ನೇ ಆಕ್ರಮಿಸಿಕೊಂಡಿದ್ದ ಪ್ರಬಲರಾದ ಬ್ರಿಟೀಷರ ವಿರುದ್ದ ಸೆಟೆದು ನಿಂತವಳು. ತಾನೊಬ್ಬಳೇ ಏಕಾಂಗಿಯಾಗಿ ಹೋರಾಡಿದ ಈ ಧೀರ ಮಹಿಳೆಯ ಕಥೆ ಎಂಥವರಿಗೂ ಸ್ಪೂರ್ತಿದಾಯಕವಾಗಬಲ್ಲುದು ಎಂದು ಅವರು ತಿಳಿಸಿದರು.
ತನ್ನ ಪುಟ್ಟ ರಾಜ್ಯದ ಸ್ವಾತಂತ್ರ್ಯ ರಕ್ಷಣೆಗಾಗಿ ಕೆಚ್ಚೆದೆಯಿಂದ ಹೋರಾಟ ನಡೆಸಿದ ಕನ್ನಡ ನಾಡಿನ ಹೆಮ್ಮೆಯ ಮಹಿಳೆ ರಾಣಿ ಚೆನ್ನಮ್ಮಳ ಅಗಾಧ ದೇಶಪ್ರೇಮವು ಎಲ್ಲರಿಗೂ ಮಾದರಿಯಾಗುವಂತಹುದು. ಆಕೆಯ ಜಯಂತ್ಯುತ್ಸವದಂದು ಕನ್ನಡಿಗರಾದ ನಾವೆಲ್ಲರೂ ಅವಳ ಹೋರಾಟವನ್ನು ನೆನೆಯುತ್ತಾ ಅವಳಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ದೇಶದುದ್ದಗಲದ ಎಲ್ಲಾ ವೀರರ ತ್ಯಾಗ ಬಲಿದಾನಗಳನ್ನು ಸ್ಮರಿಸೋಣ. ಆ ಮುಖೇನ ಅವರ ಆದರ್ಶತಮ ಬದುಕಿಗೆ ವಂದಿಸೋಣ ಎಂದರು.
ಇತಿಹಾಸದಲ್ಲಿ ಹೆಣ್ಣನ್ನು ಭೂಮಿ, ದೇವಿ, ದುರ್ಗಿಗೆ ಹೋಲಿಸಲಾಗಿದೆ. ತಾಳ್ಮೆಗೂ ಒಂದು ಮಿತಿ ಇದೆ, ಅದನ್ನು ಮೀರಿದರೆ ಹೆಣ್ಣು ದುರ್ಗಿ ಅವತಾರ ತಾಳುತ್ತಾಳೆ ಎಂಬುದಕ್ಕೆ ರಾಣಿ ಚೆನ್ನಮ್ಮ ನಿದರ್ಶನ. ತನ್ನ ಸಣ್ಣ ಸಾಮ್ರಾಜ್ಯ ಕಾಪಾಡಿಕೊಳ್ಳಲು ಬ್ರಿಟೀಷರ ವಿರುದ್ಧ ಸಿಡಿದೆದ್ದ ದಿಟ್ಟ ಮಹಿಳೆ ಚೆನ್ನಮ್ಮ, ಆಕೆಯ ಧೈರ್ಯ, ಸಾಹಸವನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು.
ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮಳ ಜಯಂತಿ ಇತಿಹಾಸ ಪ್ರಜ್ಞೆಯನ್ನು ಬಡಿದೆಬ್ಬಿಸುವಂತಿರಬೇಕು. ಈ ನೆಲದ ಇತಿಹಾಸವನ್ನು ಪರಿಚಯಿಸದಿದ್ದರೆ, ಜಾತಿ ಮೀರಿ ಭಾತೃತ್ವದ ಸಮಾಜ ಕಟ್ಟದಿದ್ದರೆ ಯಾವ ದಾರ್ಶನಿಕರ, ಮಹಾನುಭಾವರ ಜಯಂತಿ, ಜಾತ್ರೆಗಳು ಅರ್ಥಪೂರ್ಣವಾಗುವುದಿಲ್ಲ. ಈ ಸಮಾಜದಲ್ಲಿರುವ ಅಶಕ್ತರಿಗೆ ರಾಣಿ ಚೆನ್ನಮ್ಮನ ಜೀವನ ಚರಿತ್ರೆ ಪ್ರೇರಣೆಯಾಗಲಿ ಹಾಗೂ ಪ್ರತಿಯೋರ್ವ ಮಹಿಳೆ ವೀರನಾರಿ ಚೆನ್ನಮ್ಮನಂತಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಫ್ಸರ್‌ಪಾಷ, ಟಿಪ್ಪು ಸೆಕ್ಯುಲರ್ ಸೇನೆಯ ಮೌಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರಬಾಬು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಲಕ್ಷ್ಮಿದೇವಮ್ಮ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶ್ರೀನಾಥಗೌಡ ಹಾಜರಿದ್ದರು

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!