16.1 C
Sidlaghatta
Friday, December 26, 2025

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮನೆ ಮನೆ ಕವಿಗೋಷ್ಠಿ ಕಾರ್ಯಕ್ರಮ

- Advertisement -
- Advertisement -

ಗಡಿ ನಾಡು ಪ್ರದೇಶಗಳಲ್ಲಿ ಕನ್ನಡ ಸಂಸ್ಕೃತಿ, ಸಾಹಿತ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕೆಲಸ ಮಾಡಬೆಕಾಗಿದೆ ಎಂದು ಕ.ಸಾ.ಪ ಜಿಲ್ಲಾಧ್ಯಕ್ಷ ಹನುಮಂತರಾವ್ ತಿಳಿಸಿದರು.
ಪಟ್ಟಣದ ಸರಸ್ವತಿ ಕಾನ್ವೆಂಟ್ ಶಾಲೆಯ ಕಾರ್ಯದರ್ಶಿ ಎನ್.ಶ್ರೀಕಾಂತ್ ಅವರ ಕೆ.ಎಲ್.ಎನ್. ಮಾತೃಶ್ರೀ ನಿಲಯದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈಚೆಗೆ ಏರ್ಪಡಿಸಿದ್ದ ಮನೆಮನೆ ಕವಿಗೋಷ್ಠಿ ಕಾರ್ಯಕ್ರಮಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಮನೆ ಮನೆ ಕವಿಗೋಷ್ಠಿಗಳನ್ನು ಮಾಡುವ ಮೂಲಕ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಿ ಕನ್ನಡದ ಕಂಪು ಹರಡಬೇಕು ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಆಚರಿಸುವ ಸಂದರ್ಭದಲ್ಲಿ ನೂರು ಕಾರ್ಯಕ್ರಮಗಳ ಗುರಿಯನ್ನು ಹೊಂದಬೇಕಾಗಿದೆ. ಸಾಹಿತ್ಯದ ಬೆಳವಣಿಗೆಗೆ ವಿವಿಧ ಸಾಹಿತ್ಯಾತ್ಮಕ ಚಟುವಟಿಕೆಗಳನ್ನು ಹಾಕಿಕೊಳ್ಳುವ ಮೂಲಕ ಕನ್ನಡವನ್ನು ಪಸರಿಸಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಕ.ಸಾ.ಪ ತಾಲ್ಲೂಕು ಅಧ್ಯಕ್ಷ ವಿ.ಕೃಷ್ಣ ಅವರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ನ ನೂತನ ಅಧ್ಯಕ್ಷ ಕೃ.ನಾ.ಶ್ರೀನಿವಾಸ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಮನೆಮನೆ ಕವಿಗೋೋಷ್ಠಿಯಲ್ಲಿ ಸಾಹಿತ್ಯ ಸಕ್ಕರೆ ಹಾಗೂ ಕಾವ್ಯ ದಾರಾಯಿ ಬಿರದುಗಳನ್ನು ಪಡೆದಿರುವ ದೇವರ ಮಳ್ಳೂರು ಚನ್ನಕೃಷ್ಣ ಕಾಡದಿರು ತಾಯಿದೇವರಂತೆ ಕವಿತೆಯನ್ನು ವಾಚಿಸಿದರು, ಮಾಲತಿ, ಟಿ.ವಿಜಯಕುಮಾರ್, ಜಿ.ಎನ್.ಶಾಮಸುಂದರ್, ಎಸ್.ವಿ.ನಾಗರಾಜ್‌ರಾವ್, ಅನಂತಕೃಷ್ಣ, ಟಿ.ನಾರಾಯಣಸ್ವಾಮಿ, ಎನ್.ಶ್ರೀಕಾಂತ್, ಡಾ.ವಿ.ಎಸ್.ಕೃಷ್ಣಮೂರ್ತಿ, ಅನಂತಲಕ್ಷ್ಮೀ, ಸರಸ್ವತಿ ಕಾನ್ವೆಂಟ್ ಅಧ್ಯಕ್ಷ ವೆಂಕಟಸುಬ್ಬಾರಾವ್, ಚಿಕ್ಕವೆಂಕಟರಾಯಪ್ಪ ಮತ್ತಿತರರು ಸ್ವರಚಿತ ಕವಿತೆಗಳನ್ನು ವಾಚಿಸಿದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!