27.1 C
Sidlaghatta
Monday, July 14, 2025

ತಾಲ್ಲೂಕು ಕಸಾಪ ವತಿಯಿಂದ ಸಾಲುಮರದ ತಿಮ್ಮಕ್ಕ ಅವರಿಗೆ ಗೌರವ ಸಮರ್ಪಣೆ

- Advertisement -
- Advertisement -

ಪರಿಸರ ದಿನಾಚರಣೆಯ ಪ್ರಯುಕ್ತ ಶಿಡ್ಲಘಟ್ಟ ತಾಲ್ಲೂಕು ಕಸಾಪ ವತಿಯಿಂದ ಸಾಲುಮರದ ತಿಮ್ಮಕ್ಕ ಅವರ ಮನೆಯಲ್ಲಿ ಅವರನ್ನು ಗೌರವಿಸಿ ಕಸಾಪ ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ಸಾಲುಮರದ ತಿಮ್ಮಕ್ಕ ನಮ್ಮ “ಪರಿಸರ ಪ್ರಜ್ಞೆ”ಯನ್ನು ಜಾಗೃತಗೊಳಿಸಿದ ಮಹಾ ವೃಕ್ಷಮಾತೆ ಎಂದು ಅವರು ತಿಳಿಸಿದರು.
ಸಾಲುಮರದ ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿದ ಪರಿಸರವಾದಿ. ಪದ್ಮಶ್ರೀ ಪುರಸ್ಕೃತರಾದ ಇವರು ನಮ್ಮೆಲ್ಲರ ಹೆಮ್ಮೆ ಹಾಗೂ ಆದರ್ಶವಾದ ಪರಿಸರವಾದಿ. ಕಸಾಪ ವತಿಯಿಂದ ಆಚರಿಸುವ ಪರಿಸರ ದಿನಾಚರಣೆ ಹಾಗೂ ಪರಿಸರ ಸಂಬಂಧಿತ ಕಾರ್ಯಕ್ರಮಗಳಿಗೆ ಮುನ್ನುಡಿಯಾಗಿ ಸಾಲು ಮರದ ತಿಮ್ಮಕ್ಕನವರನ್ನು ಗೌರವಿಸಿ ಆಶೀರ್ವಾದ ಪಡೆದಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಸಾಪ ವತಿಯಿಂದ ಶಾಲು ಹೊದಿಸಿ, ಹಾರ, ಹಣ್ಣು ಹಾಗೂ ಪುಸ್ತಕವನ್ನು ನೀಡಿ ಸಾಲುಮರದ ತಿಮ್ಮಕ್ಕ ಅವರನ್ನು ಗೌರವಿಸಲಾಯಿತು.
ಕಸಾಪ ಸದಸ್ಯ ಬೈರಾರೆಡ್ಡಿ, ಸಾಲುಮರದ ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!