21 C
Sidlaghatta
Saturday, February 21, 2026

ತಾಲ್ಲೂಕು ಸರ್ಕಾರಿ ನೌಕರರ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಮಂಜೂರು ಮಾಡುವಂತೆ ಒತ್ತಾಯಿಸಿ ತಾಲ್ಲೂಕು ಸರ್ಕಾರಿ ನೌಕರರು ಶುಕ್ರವಾರ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ತಾಲ್ಲೂಕು ಕಚೇರಿಯಲ್ಲಿ ಮನವಿಯನ್ನು ಸಲ್ಲಿಸಿದರು.
ನಗರದ ಸರ್ಕಾರಿ ರೇಷ್ಮೆ ಬಿತ್ತನೆ ಕೋಠಿ ಆವರಣದಿಂದ ಮೆರವಣಿಗೆ ನಡೆಸಿದ ತಾಲ್ಲೂಕು ಸರ್ಕಾರಿ ನೌಕರರು ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಾಯಿಸಿದರು.
ಐದು ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚಿಸುವ ಸಂಪ್ರದಾಯವನ್ನು ಪರಾಮರ್ಶಿಸಿದಲ್ಲಿ ರಾಜ್ಯ ಸರ್ಕಾರವು ಇದುವರೆಗೂ ಸುಮಾರು 10 ವೇತನ ಆಯೋಗಗಳನ್ನು ರಚಿಸಬೇಕಿತ್ತು. ಆದರೆ ಸರ್ಕಾರ ರಚಿಸಿರುವ ಸಮಿತಿಗಳು ಅವೈಜ್ಞಾನಿಕ ಸಿದ್ಧಾಂತಗಳನ್ನು ಅನುಸರಿಸುವ ಮುಖಾಂತರ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಮತ್ತು ಭತ್ಯೆಗಳನ್ನು ಮಂಜೂರು ಮಾಡುವಲ್ಲಿ ವಿಫಲವಾಗಿದೆ. ವೇತನ ಆಯೋಗಗಳ ರಚನೆಯಲ್ಲಿ ಆಗಿರುವ ಕಾಲಮಿತಿ ತಾರತಮ್ಯವನ್ನು ತಪ್ಪಿಸಲು ರಾಜ್ಯ ಸರ್ಕಾರಿ ನೌಕರರಿಗೂ ಸಹ ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶೀಫಾರಸ್ಸುಗಳನ್ನು ಅನುಷ್ಠಾನಗೊಳಿಸಬೇಕು. ರಾಷ್ಟ್ರದಲ್ಲೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಅತ್ಯಂತ ಕಡಿಮೆ ವೇತನ ಹಾಗೂ ಭತ್ಯೆಗಳನ್ನುಪಡೆಯುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳಿಗೆ ತಲುಪಿಸಲು ಮನವಿ ಪತ್ರವನ್ನು ಗ್ರೇಡ್ 2 ತಹಶೀಲ್ದಾರ್ ವಾಸುದೇವಮೂರ್ತಿ ಅವರಿಗೆ ಸಲ್ಲಿಸಿದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಕೆ.ಗುರುರಾಜರಾವ್, ಕಾರ್ಯದರ್ಶಿ ಅಕ್ಕಲರೆಡ್ಡಿ, ವಿಜಯಕುಮಾರ್, ಕೆ.ಎನ್.ಸುಬ್ಬರೆಡ್ಡಿ, ರಾಮಚಂದ್ರಪ್ಪ, ಶಶಿಕುಮಾರ್, ಗೋಪಿನಾಥ್, ಕೇಶವರೆಡ್ಡಿ, ಶ್ರೀರಾಮಯ್ಯ, ಸಿ.ಎಂ.ಮುನಿರಾಜು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!