ನಗರದ ಕಾಳಿಕಾಂಬ ಕಮಠೇಶ್ವರಸ್ವಾಮಿ ದೇವಾಲಯದಲ್ಲಿ ಭಾನುವಾರ ಶ್ರೀ ಮಾರುತಿ ಸಂಗೀತ ಅಕಾಡೆಮಿ ವತಿಯಿಂದ ಪುರಂದರಸಾಸರು, ತ್ಯಾಗರಾಜ ಸ್ವಾಮಿ, ಕನಕದಾಸರು, ಯೋಗಿ ನಾರೇಯಣ ಯತೀಂದ್ರರು ಹಾಗೂ ವಾಗ್ಗೇಯಕಾರರ ಆರಾಧನ ಸಂಗೀತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
‘ಪುರಾತನ ಕಾಲದಿಂದಲೂ ನಮ್ಮ ಸಮಾಜದಲ್ಲಿ ಸಂಗೀತಕ್ಕೆ ಹೆಚ್ಚು ಪ್ರಾಶಸ್ತ್ಯ ಕೊಟ್ಟಿದ್ದಾರೆ. ಯುವ ಪೀಳಿಗೆಗೆ ಸಂಗೀತವನ್ನು ಕಲಿಸುತ್ತಾ ನಮ್ಮ ಸಂಸ್ಕೃತಿಯನ್ನು ಉಳಿಸುವಲ್ಲಿ ಮಾರುತಿ ಸಂಗೀತ ಅಕಾಡೆಮಿಯು ಶ್ರಮಿಸುತ್ತಿದ್ದು, ಈ ಕಾರ್ಯಕ್ರಮದ ಮೂಲಕ ಮಕ್ಕಳ ಪ್ರತಿಭೆಯನ್ನು ಪರಿಚಯಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಚಿಕ್ಕಮಕ್ಕಳು ತ್ಯಾಗರಾಜರ ಮತ್ತು ಯೋಗಿನಾರಾಯಣ ಯತೀಂದ್ರರ ಕೀರ್ತನೆಗಳನ್ನು ಹಾಡಿ ಗಮನ ಸೆಳೆಯುವರು’ ಎಂದು ವಿದ್ವಾನ್ ಜಗದೀಶ್ ಕುಮಾರ್ ತಿಳಿಸಿದರು.
ಸಂಗೀತ ಮಹೋತ್ಸವಕ್ಕೆ ವಿವಿಧ ಕಡೆಯಿಂದ ಆಗಮಿಸಿದ್ದ ವಿದ್ವಾಂಸರು ಹಾಗೂ ಮಕ್ಕಳಿಂದ ದಿನಪೂರ್ತಿ ವಿಶೇಷ ಸಂಗೀತ ಗಾಯನಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮಾರುತಿ ಸಂಗೀತ ಅಕಾಡೆಮಿ ಅಧ್ಯಕ್ಷ ಸೋಮಶೇಖರ್, ಸಂಗೀತ ಶಿಕ್ಷಕಿ ಮಂಜುಳ, ಪಿಟೀಲು ವಿದ್ವಾನ್ ಜಗದೀಶ್ ಕುಮಾರ್, ಮೃದಂಗ ವಾದಕ ಅಶ್ಥಥನಾರಾಯಣಚಾರ್ ಮತ್ತು ಸಂಗೀತ ಕಲಾಭಿಮಾನಿಗಳು ಹಾಜರಿದ್ದರು.
- Advertisement -
- Advertisement -
- Advertisement -