ತಾಲ್ಲೂಕಿನಲ್ಲಿ ಶಾಲೆಗಳ ದಾಖಲಾತಿ ಆರಂಭವಾಗಿದ್ದು, ದುಬಾರಿ ಶುಲ್ಕವನ್ನು ಪಡೆಯುತ್ತಿರುವ ಖಾಸಗಿ ಶಾಲೆಗಳನ್ನು ಗುರುತಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ರೈತ ಸಂಘದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳು ತಾವು ಪಡೆಯುವ ಶುಲ್ಕದ ವಿವರವನ್ನು ಕಡ್ಡಾಯವಾಗಿ ನಾಮಫಲಕದಲ್ಲಿ ಪ್ರಕಟಿಸಬೇಕು. ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚೆಚ್ಚು ಹಣವನ್ನು ಪಡೆಯುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳುವಂತೆ ರೈತರು ಒತ್ತಾಯಿಸಿದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಮುನಿಕೆಂಪಣ್ಣ, ಬಾಲಮುರಳಿಕೃಷ್ಣ, ಪ್ರತೀಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.