Home News ದೇವರ ದಾಸಿಮಯ್ಯ ಜಯಂತ್ಯುತ್ಸವ

ದೇವರ ದಾಸಿಮಯ್ಯ ಜಯಂತ್ಯುತ್ಸವ

0

ಮಹಾನ್ ವ್ಯಕ್ತಿಗಳ ಆಚರಣೆಗಳು ಕೇವಲ ಸಾಂಪ್ರದಾಯಿಕವಾಗಿರದೇ ಅವರ ತತ್ವ ಆದರ್ಶ ಮತ್ತು ಜೀವನ ಶೈಲಿಗಳನ್ನು ಅಳವಡಿಸಿಕೊಂಡು ಪಾಲಿಸುವ ಜೊತೆಗೆ ಇತರರಿಗೂ ಅಳವಡಿಸಿಕೊಳ್ಳುವಲ್ಲಿ ನೆರವಾದರೆ ಮಾತ್ರ ಆಚರಣೆಗಳಿಗೊಂದು ಅರ್ಥ ಬರುತ್ತದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ನಾಡಹಬ್ಬಗಳ ಆಚರಣಾ ಸಮಿತಿ ಬುಧವಾರ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಚನಕಾರರ ಯುಗದಲ್ಲಿ ಸಮಾನತೆ ಕಂಡುಕೊಳ್ಳುವ ನಿಟ್ಟಿನಲ್ಲಿ ಹಲವು ಸಾಹಿತ್ಯಗಳನ್ನು ರಚಿಸಿ ಜಾತಿ ಪದ್ಧತಿ ನಿವಾರಣೆಗೆ ಯತ್ನಿಸಿದ್ದ ದೇವರ ದಾಸಿಮಯ್ಯನವರ ಸಾಮಾಜಿಕ ಚಿಂತನೆ ಅಮೋಘವಾದದ್ದು.ದೇವರ ದಾಸಿಮಯ್ಯನವರು ತಮ್ಮ ನೇಕಾರಿಕೆ ಕಾಯಕ ಜೊತೆಗೆ ವಚನ ಸಾಹಿತ್ಯ ರಚಿಸುವ ಮೂಲಕ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದರು. ಅಂಥವರ ಸಾಮಾಜಿಕ ಕಳಕಳಿ ಇರುವ ವಚನ ಸಾಹಿತ್ಯಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಿ ಯುವ ಪೀಳಿಗೆಯಲ್ಲಿ ಸಾಮಾಜಿಕ ಚಿಂತನೆ ಮೂಡಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.
ಈ ಸಂದರ್ಭದಲ್ಲಿ ನೇಕಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಹಿರಿಯ ಸಾಧಕರನ್ನು ಗೌರವಿಸಲಾಯಿತು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ನಿವೃತ್ತ ಪ್ರಾಂಶುಪಾಲ ಮೊಹಮದ್ ಖಾಸಿಂ ಹಾಗೂ ವಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಾರಾಯಣಸ್ವಾಮಿ ದೇವರ ದಾಸಿಮಯ್ಯ ಅವರ ಜೀವನ ಸಾಧನೆಗಳ ಬಗ್ಗೆ ಮಾತನಾಡಿದರು.
ಗ್ರೇಡ್ 2 ತಹಶೀಲ್ದಾರ್ ಮುನಿಕೃಷ್ಣಪ್ಪ, ನೇಕಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಕೆ.ನಾಗರಾಜ್, ತಾಲ್ಲೂಕು ಘಟಕದ ಅಧ್ಯಕ್ಷ ಸುಬ್ರಮಣಿ ಹಾಜರಿದ್ದರು.