31.5 C
Sidlaghatta
Wednesday, March 4, 2026

ದೇಶಕ್ಕೆ ಸ್ವಾತಂತ್ರ್ಯ ಬಂದರೂ ದಲಿತರಿಗೆ ಇನ್ನೂ ಸಿಕ್ಕಿಲ್ಲ

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದರೂ ದಲಿತರಿಗೆ ಇನ್ನೂ ಸಿಕ್ಕಿಲ್ಲ ಎಂದು ಭಾರತ ಜನಜಾಗೃತಿ ಸೇನೆಯ ರಾಜ್ಯಾಧ್ಯಕ್ಷ ಸಿ.ಮುನಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಲಿತ ವಿರೋಧಿ, ಭ್ರಷ್ಟಾಚಾರ, ಸ್ವಜನ ಪಕ್ಷಪಾತದಿಂದ ನಡೆಯುತ್ತಿರುವ ಆಡಳಿತ ವಿರುದ್ಧ ಕರಾಳ ದಿನವನ್ನಾಗಿ ಈ ಬಾರಿಯ ಆಗಸ್ಟ್ 15 ರಂದು ಆಚರಿಸಲಾಗುವುದು. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳಾಗುತ್ತಿದ್ದರೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ .ಅಂಬೇಡ್ಕರ್ ಅವರ ಆಶಯಗಳು ಈಡೇರಿಲ್ಲ. ದಲಿತ ಪರ ಇರುವ ಕಾನೂನುಗಳನ್ನು ಜಾರಿಗೊಳಿಸಲು ಅಧಿಕಾರಿ ವರ್ಗಕ್ಕೆ ಇಷ್ಟವಿಲ್ಲ. ಜನಪ್ರತಿನಿಧಿಗಳು ದಲಿತರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಇಟ್ಟುಕೊಂಡು ದಲಿತರ ಜೀವನದೊಂದಿಗೆ ಆಟವಾಡುತ್ತಿದ್ದಾರೆ. ದಿನಕಳೆದಂತೆ ದಲಿತರ ಮೇಲಿನ ದಬ್ಬಾಳಿಕೆಗಳು, ಭೂಕಬಳಿಕೆ, ಸಂವಿಧಾನದ ತಿದ್ದುಪಡಿಗಳು ನಿರಂತರವಾಗಿ ಮಡೆಯುತ್ತಿದ್ದು, ದೇಶದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ದೂರಿದ್ದಾರೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!