33.1 C
Sidlaghatta
Thursday, April 18, 2024

ದೇಶದ ಏಕತೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ಶ್ಯಾಂ ಪ್ರಸಾದ್ ಮುಖರ್ಜಿ

- Advertisement -
- Advertisement -

ದೇಶದ ಏಕತೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ಶ್ಯಾಂ ಪ್ರಸಾದ್ ಮುಖರ್ಜಿರವರ ಆದರ್ಶಗಳನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳಬೇಕು ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಹೇಳಿದರು.
ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಶುಕ್ರವಾರ ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಶ್ಯಾಂ ಪ್ರಕಾಶ್ ಮುಖರ್ಜಿ ರವರ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
೧೯೫೨ ರಲ್ಲಿ ಪ್ರಥಮವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಭಾರತೀಯ ಜನಸಂಘ ಪಕ್ಷವನ್ನು ಹುಟ್ಟುಹಾಕಿದವರು ಶ್ಯಾಂ ಪ್ರಸಾದ್ ಮುಖರ್ಜಿ. ಅವರ ಅಧ್ಯಕ್ಷತೆಯಲ್ಲಿ ೧೯೮೦ ರ ಏಪ್ರಿಲ್ ೬ ರಂದು ಅಟಲ್‌ಬಿಹಾರಿ ವಾಜಪೇಯಿ ಹಾಗು ಲಾಲ್ ಕೃಷ್ಣ ಅಡ್ವಾಣಿಯವರನ್ನೊಳಗೊಂಡ ಬಿಜೆಪಿ ಪಕ್ಷ ಉದಯವಾಯಿತು. ಆದರೆ ಬಿಜೆಪಿ ಪಕ್ಷವು ರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ೨೫ ವರ್ಷಗಳ ಕಾಲ ಸಮಯ ಬೇಕಾಯಿತು ಎಂದರು.
ರಾಷ್ಟ್ರದ ಅಭಿವೃದ್ಧಿಯಾಗಬೇಕಾದರೆ ಅದು ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ. ರಾಷ್ಟ್ರದಲ್ಲಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ ಎಂದರು.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಜನವಿರೋಧಿ ನೀತಿಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಮಾಡುವುದರೊಂದಿಗೆ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಹುತಾತ್ಮ ಯೋಧ ಗಂಗಾಧರ್‌ಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.
ಕಾರ್ಯಕ್ರಮದಲ್ಲಿ ಬಿ.ಜೆ.ಪಿ ಜಿಲ್ಲಾ ಉಪಾಧ್ಯಕ್ಷ ಸುರೇಂದ್ರಗೌಡ, ಪ್ರಧಾನ ಕಾರ್ಯದರ್ಶಿ ಶ್ರೀರಾಮರೆಡ್ಡಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ತರಬಳ್ಳಿ ಬಾಸ್ಕರ್‌ರೆಡ್ಡಿ, ಮುಖಂಡರಾದ ಶಿವಕುಮಾರಗೌಡ, ಸುರೇಶ್, ದಾಮೋದರ್‌, ಸುಜಾತಮ್ಮ, ಮುನಿರತ್ನಮ್ಮ, ರತ್ನಮ್ಮ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!