16.1 C
Sidlaghatta
Friday, December 12, 2025

ದೇಶದ ಏಕತೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ಶ್ಯಾಂ ಪ್ರಸಾದ್ ಮುಖರ್ಜಿ

- Advertisement -
- Advertisement -

ದೇಶದ ಏಕತೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ಶ್ಯಾಂ ಪ್ರಸಾದ್ ಮುಖರ್ಜಿ ರವರ ಆದರ್ಶಗಳನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳಬೇಕು ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಹೇಳಿದರು.
ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಸೋಮವಾರ ನಗರದ ಅರಳೆಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಶ್ಯಾಂ ಪ್ರಕಾಶ್ ಮುಖರ್ಜಿ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
೧೯೫೨ ರಲ್ಲಿ ಪ್ರಥಮವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಭಾರತೀಯ ಜನಸಂಘ ಪಕ್ಷವನ್ನು ಹುಟ್ಟುಹಾಕಿದ ಶ್ಯಾಂ ಪ್ರಸಾದ್ ಮುಖರ್ಜಿಯವರ ಅಧ್ಯಕ್ಷತೆಯಲ್ಲಿ ೧೯೮೦ ರ ಏಪ್ರಿಲ್ ೬ ರಂದು ಅಟಲ್ಬಿಹಾರಿ ವಾಜಪೇಯಿ ಹಾಗು ಲಾಲ್ ಕೃಷ್ಣ ಅಡ್ವಾಣಿಯವರನ್ನೊಳಗೊಂಡ ಬಿಜೆಪಿ ಪಕ್ಷ ಉದಯವಾದರೂ ರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ೨೫ ವರ್ಷಗಳ ಕಾಲ ಸಮಯ ಬೇಕಾಯಿತು ಎಂದರು.
ರಾಷ್ಟ್ರದ ಅಭಿವೃದ್ಧಿಯಾಗಬೇಕಾದರೆ ಅದು ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ. ರಾಷ್ಟ್ರದಲ್ಲಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ ಎಂದರು.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಜನವಿರೋಧಿ ನೀತಿಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಮಾಡುವುದರೊಂದಿಗೆ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಬಿ.ಜೆ.ಪಿ ಜಿಲ್ಲಾ ಉಪಾಧ್ಯಕ್ಷ ಸುರೇಂದ್ರಗೌಡ, ಪ್ರಧಾನ ಕಾರ್ಯದರ್ಶಿಗಳಾದ ಮುನಿರಾಜು, ತರಬಳ್ಳಿ ಬಾಸ್ಕರ್ರೆಡ್ಡಿ, ಮುಖಂಡರಾದ ದೊಣ್ಣಹಳ್ಳಿರಾಮಣ್ಣ, ಸುರೇಶ್, ನಗರಸಭೆ ಸದಸ್ಯ ಎಸ್.ರಾಘವೇಂದ್ರ, ಸುಜಾತಮ್ಮ, ಮಂಜುಳಮ್ಮ ಮತ್ತಿತರರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!