23.1 C
Sidlaghatta
Saturday, July 19, 2025

ದೇಶದ ಪ್ರತಿಯೊಬ್ಬ ಪ್ರಜೆಗೂ ಆಹಾರ ಮತ್ತು ಉತ್ತಮ ಆರೋಗ್ಯ ಸಿಗಬೇಕು

- Advertisement -
- Advertisement -

ದೇಶದ ಹೆಮ್ಮೆಯ ತತ್ವಜ್ಞಾನಿ, ಸಾಮಾಜಿಕ ತಜ್ಞ ಪಂಡಿತ್ ದೀನದಯಾಳ ಉಪಾಧ್ಯಾಯರ ತತ್ವ ಆದರ್ಶಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಳ್ಳಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಹೇಳಿದರು.
ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಬಿ.ಜೆ.ಪಿ ಯುವಮೋರ್ಚಾ ವತಿಯಿಂದ ಪಂಡಿತ್ ದೀನದಯಾಳ್ ಉಪಾದ್ಯಾಯರ ಜನ್ಮಶತಾಬ್ದಿ ಅಂಗವಾಗಿ ಏರ್ಪಡಿಸಲಾಗಿದ್ದ ಗ್ರಾಮೀಣ ಕ್ರೀಡಾ ಉತ್ಸವ ಕಬಡ್ಡಿ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದ ಪ್ರತಿಯೊಬ್ಬ ಪ್ರಜೆಗೂ ಆಹಾರ ಮತ್ತು ಉತ್ತಮ ಆರೋಗ್ಯ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಹೋರಾಟ ಮಾಡುವ ಮೂಲಕ ವಿದೇಶಿ ವ್ಯಾಮೋಹಕ್ಕೆ ಒಳಗಾಗದೇ ಪ್ರತಿಯೊಬ್ಬರೂ ದೇಶದ ಪರಂಪರೆ ಹಾಗು ಸಂಸ್ಕøತಿಯನ್ನು ಗೌರವಿಸಿ ದೇಶಭಕ್ತಿ ರೂಡಿಸಿಕೊಳ್ಳುವಂತೆ ಮಾಡಿದ ಮಾಹನ್ ವ್ಯಕ್ತಿಗಳು ಎಂದರು.
ಬಿ.ಜೆ.ಪಿ ಸಂಸ್ಥಾಪಕ ಪಂಡಿತ್ ದೀನ ದಯಾಳ್ ಉಪಾದ್ಯಾಯ್ ಅವರ ನೆನಪಿಗಾಗಿ ಗ್ರಾಮೀಣ ಜನರಲ್ಲಿ ಅಡಗಿರುವ ಪ್ರತಿಭೆಯನ್ನು ಉತ್ತೇಜಿಸುವ ಸಲುವಾಗಿ ಕಬ್ಬಡಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಪ್ರತಿಭಾವಂತರು ಕ್ರೀಡೆಗಳಲ್ಲಿ ಭಾಗವಹಿಸಿ ಹುಟ್ಟಿದ ಊರು ಸೇರಿದಂತೆ ದೇಶಕ್ಕೆ ಖ್ಯಾತಿ ತರುವಂತಹ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.
ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿಜೇತರಾದ ತಂಡಗಳಿಗೆ ಪ್ರಥಮ ಬಹುಮಾನವಾಗಿ 5,000 ಹಾಗೂ ದ್ವಿತೀಯ ಬಹುಮಾನ 2,000 ರೂಗಳನ್ನು ನೀಡಲಾಯಿತು.
ಬಿ.ಜೆ.ಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀರಾಮರೆಡ್ಡಿ, ಯುವಮೋರ್ಚಾ ಅದ್ಯಕ್ಷ ಬೈರಾರೆಡ್ಡಿ, ಮುಖಂಡರಾದ ದಾಮೋದರ್, ಮಂಜುಳಮ್ಮ, ಗೋಕುಲ್, ವಿಜಯಕುಮಾರ್, ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!