ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳೂ ಕೂಡಾ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಉದ್ದೇಶದಿಂದ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣೆಕ ಪ್ರಗತಿ ಕಾಣಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಆಯೋಜನೆ ಮಾಡಲಾಗಿದ್ದ ಉಚಿತ ಸೈಕಲ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ, ಮಹಾನ್ ಸಾಧಕರು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದವರಿದ್ದಾರೆ, ಖಾಸಗಿ ಶಾಲೆಗಳ ಬಗ್ಗೆ ವ್ಯಾಮೋಹ ಕಡಿಮೆ ಮಾಡಬೇಕು ಎಂದರು.
ಮುಖಂಡ ದೊಣ್ಣಹಳ್ಳಿ ರಾಮಣ್ಣ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಾಂತಮ್ಮ, ಗ್ರಾಮ ಪಂಚಾಯತಿ ಸದಸ್ಯರಾದ ಮುರಳಿ, ಗುಮ್ಮರೆಡ್ಡಿ, ಮಾಜಿ ಸದಸ್ಯ ರಾಮಕೃಷ್ಣಪ್ಪ, ವೆಂಕಟೇಶ್, ರವಿ, ಬೈರಾರೆಡ್ಡಿ, ದ್ಯಾವಪ್ಪ, ಶ್ರೀನಿವಾಸ್, ಸೀತಪ್ಪ, ಬೈರಪ್ಪ, ಮುಖ್ಯಶಿಕ್ಷಕ ಕಾಂತರಾಜ್, ಕದಿರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -