ತಾಲ್ಲೂಕಿನ ದ್ರಾಕ್ಷಿ ಬೆಳೆಗಾರರು ದ್ರಾಕ್ಷಿ ಬೆಳೆಗೆ ಬೆಳೆ ವಿಮೆ ಮಾಡಿಸಿಕೊಂಡು ಬೆಳೆ ನಷ್ಟಕ್ಕೆ ರಕ್ಷಣೆಯನ್ನು ಪಡೆದುಕೊಳ್ಳುವಂತೆ ಸಹಾಯಕ ತೋಟಗಾರಿಕೆ ನಿರ್ದೇಶಕ ಆನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ್ರಾಕ್ಷಿ ಬೆಳೆಯಲ್ಲಿ ಕಾಯಿ ಕಚ್ಚುವ ಅವಧಿಯಿಂದ ಕಟಾವು ಹಂತದವರೆಗೆ ಅಧಿಕ ಮಳೆಯಿಂದ ಆಗುವ ಬೆಳೆ ನಷ್ಟಕ್ಕೆ ವಿಮಾ ಯೋಜನೆ ಅಡಿಯಲ್ಲಿ ರಕ್ಷಣೆ ಸಿಗುತ್ತದೆ. ರೈತರು ವಿಮಾ ಪ್ರೀಮಿಯಂ ಮೊತ್ತ 2,880 ರೂ ಕಟ್ಟಿದಲ್ಲಿ ಸರ್ಕಾರ ಕೂಡ ಅಷ್ಟೇ ಮೊತ್ತವನ್ನು ನೀಡುತ್ತದೆ. ಪ್ರತಿ ಎಕರೆಗೆ ಗರಿಷ್ಠ ವಿಮಾ ಮೊತ್ತ 48 ಸಾವಿರ ರೂಗಳು ಸಿಗಲಿದೆ ಎಂದು ತಿಳಿಸಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -