ಶಿಡ್ಲಘಟ್ಟ ತಾಲ್ಲೂಕಿನ ಅಂಕತಟ್ಟಿ ಗೇಟ್ ಬಳಿಯ ವಿದ್ಯಾದ್ರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿರುವ ಎಚ್.ಆರ್.ರಚನಾ ಅವರನ್ನು ಕ.ಸಾ.ಪ ವತಿಯಿಂದ ಪುರಸ್ಕರಿಸಿ ನಗದು ಬಹುಮಾನವನ್ನು ನೀಡಲಾಯಿತು. ಕ.ಸಾ.ಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಜಂಗಮಕೋಟೆ ಹೋಬಳಿ ಅಧ್ಯಕ್ಷ ಆರ್.ಎ.ಉಮೇಶ್, ಗೌರವ ಕಾರ್ಯದರ್ಶಿ ಎ.ಎಂ.ತ್ಯಾಗರಾಜ್, ಪ್ರಧಾನ ಸಂಚಾಲಕ ಸುದರ್ಶನ್, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜೆ.ಎಸ್.ರಾಮಚಂದ್ರಪ್ಪ, ನಿರ್ದೇಶಕ ಕೇಶವಪ್ಪ, ಪ್ರಾಂಶುಪಾಲ ಕೆ.ಜಿ.ನಾಗರಾಜು, ಉಪನ್ಯಾಸಕರಾದ ಕೆ.ಎಂ.ದೇವರಾಜ್, ಟಿ.ವೆಂಕಟೇಶ್, ಕೆ.ಎಂ.ರಾಮಾಂಜಪ್ಪ, ಎಸ್.ಪಿ.ವೆಂಕಟೇಶ್ ಹಾಜರಿದ್ದರು.
- Advertisement -
- Advertisement -