ವಿದ್ಯಾರ್ಥಿಗಳು ನಂದಿನಿ ಉತ್ಪನ್ನಗಳ ರಾಯಭಾರಿಗಳಾಗುವ ಮೂಲಕ ನಮ್ಮ ರೈತರಿಗೆ ಪರೋಕ್ಷವಾಗಿ ನೆರವಾಗುವಂತೆ ಶಾಸಕ ರಾಜಣ್ಣ ತಿಳಿಸಿದರು.
ನಗರದ ಡಾಲ್ಪಿನ್ ವಿದ್ಯಾಸಂಸ್ಥೆಯಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಬುಧವಾರ ನಡೆದ ಪ್ರೌಢಶಾಲೆಯ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಖರೀದಿಸಿದಲ್ಲಿ ಶೇಕಡಾ 90 ರಷ್ಟು ಹಣ ನಮ್ಮ ಭಾಗದ ರೈತರಿಗೆ ತಲುಪುತ್ತದೆ. ಇದರಿಂದ ನಮ್ಮ ರೈತರನ್ನು ಬಲಪಡಿಸಿದಂತಾಗುತ್ತದೆ. ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಯಾಗುತ್ತದೆ. ನಂದಿನಿ ೬೫ ವಿವಿಧ ಶ್ರೇಣಿಯ ಶ್ರೇಷ್ಠ ಮಟ್ಟದ ಉತ್ಪನ್ನಗಳನ್ನು ತಯಾರಿಸುತ್ತಿದೆ. ನಮ್ಮ ದೇಶದ ಗಡಿ ಕಯುತ್ತಿರುವ ಸೈನಿಕರಿಗೂ ನಂದಿನಿ ಹಾಲಿನ ಉತ್ಪನ್ನಗಳೆ ಸರಬರಾಜಾಗುತ್ತಿವೆ ಎಂದು ಹೇಳಿದರು.
ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ, ತಾಲ್ಲೂಕಿನ ೪೮ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ, ರಸ ಪ್ರಶ್ನೆ, ಸಂಗೀತ ಸ್ಪರ್ದೆ ಹಮ್ಮಿಕೊಳ್ಳಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೋಲಾರದಲ್ಲಿ ಸ್ಪರ್ಧೆಯನ್ನು ನಡೆಸಲಾಗುವುದು. ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ ಐದು ಸಾವಿರ ರೂ, ದ್ವಿತೀಯ ಸ್ಥಾನಕ್ಕೆ ಮೂರು ಸಾವಿರ ರೂ, ತೃತೀಯ ಸ್ಥಾನಕ್ಕೆ ಎರಡು ಸಾವಿರ ರೂಗಳನ್ನು ಹಾಗೂ ಹತ್ತು ಮಂದಿಗೆ ಸಮಾಧಾನಕರ ಬಹುಮಾನಗಳನ್ನು ವೈಯಕ್ತಕವಾಗಿ ನೀಡುವುದಾಗಿ ಹೇಳಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಬಾಬು, ಡಾಲ್ಫಿನ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್, ನಂದಿನಿ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಲಕ್ಷೀ ಪ್ರಸಾದ್ ಯಾದವ್, ಕೋಚಿಮುಲ್ ಉಪವ್ಯವಸ್ಥಾಪಕರಾದ ಬಿ.ಎಸ್.ಹನುಮಂತರಾವ್, ಲಕ್ಷೀನಾರಾಯಣ್, ಶಿಕ್ಷಣ ಸಂಯೋಜಕ ಲಕ್ಷ್ಮೀನರಸಿಂಹಗೌಡ ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -