23.1 C
Sidlaghatta
Wednesday, February 18, 2026

ನಗರದಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ

- Advertisement -
- Advertisement -

ಕಾರ್ಮಿಕರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ನ ಮೊದಲನೆಯ ದಿನ ಮಂಗಳವಾರ ತಾಲ್ಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಸಾರಿಗೆ ಸಂಚಾರ ಸ್ಥಗಿತಗೊಂಡಿದ್ದರಿಂದ, ಬ್ಯಾಂಕುಗಳು ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ನಗರದಲ್ಲಿ ಜನಸಂಚಾರ ಕಡಿಮೆಯಿತ್ತು. ಬೆಳಗ್ಗೆ ಅಂಗಡಿಗಳು ತೆರೆಯುವುದು ತಡ ಮಾಡಿದರು. ನಂತರ ಒಬ್ಬೊಬ್ಬರೇ ಅಂಗಡಿಗಳನ್ನು ತೆರೆಯಲಾರಂಭಿಸಿದರು. ಹೋಟೆಲುಗಳು, ಪೆಟ್ರೋಲ್ ಬಂಕ್, ರೇಷ್ಮೆ ಗೂಡಿನ ಮಾರುಕಟ್ಟೆ, ತಾಲ್ಲೂಕು ಕಚೇರಿ, ಖಾಸಗಿ ಬಸ್ಸುಗಳು, ಆಟೋ ಮುಂತಾದವುಗಳು ಎಂದಿನಂತಿದ್ದವು.
ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟದ ನೌಕರರು, ಗ್ರಾಮ ಪಂಚಾಯಿತಿ ನೌಕರರು, ಕೆ.ಪಿ.ಆರ್.ಎಸ್., ಡಿ.ವೈ.ಎಫ್.ಐ, ರೈತ ಮುಖಂಡರು ಬಂದ್ ಗೆ ಬೆಂಬಲ ನೀಡಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ನಗರದ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಸ್ ನಿಲ್ದಾಣದಲ್ಲಿ ಮಾನವ ಸರಪಣಿಯನ್ನು ನಿರ್ಮಿಸಿ ಪ್ರತಿಭಟಿಸಿದರು.
“ದೇಶದಲ್ಲಿ ೧೯೯೧ ರಲ್ಲಿ ಜಾರಿಗೆ ಬಂದ ಹೊಸ ಆರ್ಥಿಕ ನೀತಿಗಳನ್ನು ಕೇಂದ್ರ ಸರ್ಕಾರ ವೇಗವಾಗಿ ಜಾರಿ ಮಾಡುತ್ತಿದ್ದು, ಇದರ ಪರಿಣಾಮವಾಗಿ ದೇಶಕ್ಕೆ ಅನ್ನ ಕೊಡುವ ರೈತರು, ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕರು, ಸೇವೆಯನ್ನು ಮಾಡುವ ನೌಕರರು, ಕೂಲಿಯನ್ನು ನಂಬಿ ಬದುಕುತ್ತಿರುವ ಬಡಜನರು ಬೀದಿಪಾಲಾಗುತ್ತಿದ್ದಾರೆ” ಎಂದು ಈ ಸಂದರ್ಭದಲ್ಲಿ ಸಿ.ಐ.ಟಿ.ಯು ಜಿಲ್ಲಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಆರೋಪಿಸಿದರು.
ಗ್ರಾಮ ಪಂಚಾಯಿತಿ ನೌಕರರ ಕಾರ್ಯದರ್ಶಿ ಕೆ.ಎಂ. ಪಾಪಣ್ಣ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಗುಲ್ಜಾರ್, ಕರ್ನಾಟಕ ಪ್ರಾಂತ್ಯ ರೈತ ಸಂಘದ ಮುಖಂಡ ವೆಂಕಟರೆಡ್ಡಿ, ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಶಂಕರಪ್ಪ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಅಶ್ವಥಮ್ಮ, ಸಿ.ಐ.ಟಿ.ಯು ಸಂಯೋಜಕ ಫಯಾಜ್, ಸಿ.ಐ.ಟಿ.ಯು.ನೌಕರರ ಕಾರ್ಯದರ್ಶಿ ಗೀತಾ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!