ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಸೂಚನೆ

- Advertisement -
- Advertisement -

ನಗರದಾದ್ಯಂತ ಸ್ವಚ್ಛತೆಯನ್ನು ಕಾಪಾಡಲು ಅಗತ್ಯವಾಗಿರುವ ಕ್ರಮಗಳನ್ನು ಕೈಗೊಳ್ಳುವಂತೆ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ನಾಗರಾಜಯ್ಯಶೆಟ್ಟಿ ಮುಖ್ಯಾಧಿಕಾರಿ ಎಸ್.ಎ.ರಾಮ್ಪ್ರಕಾಶ್ ಅವರಿಗೆ ಸೂಚಿಸಿದರು.
ನಗರದ ಪ್ರಥಮದರ್ಜೆ ಕಾಲೇಜಿನ ಬಳಿಯಲ್ಲಿ ರಸ್ತೆಯ ಇಕ್ಕೆಲುಗಳಲ್ಲಿ ಹಾಕಿದ್ದ ಕಸದ ರಾಶಿ ಹಾಗೂ ಪ್ರಥಮದರ್ಜೆ ಕಾಲೇಜಿನ ಆವರಣವನ್ನು ಸೋಮವಾರ ವೀಕ್ಷಣೆ ಮಾಡಿದ ಅವರು ಪ್ರಥಮದರ್ಜೆ ಕಾಲೇಜಿನ ಮುಂಭಾಗದಲ್ಲಿರುವ ತರಕಾರಿ ಅಂಗಡಿಯನ್ನು ತೆರವುಗೊಳಿಸಿ ಎಂದರು. ನಗರದಾದ್ಯಂತ ಕಾಲ ಕಾಲಕ್ಕೆ ಬ್ಲೀಚಿಂಗ್ ಸಿಂಪಡಣೆ ಮಾಡುವಂತೆ ಸೂಚಿಸಿದರು.
ನಗರದ ಪದವಿ ಪೂರ್ವ ಕಾಲೇಜು, ಪ್ರಥಮ ದರ್ಜೆ ಕಾಲೇಜುಗಳ ಆವರಣ ಹಾಗೂ ಮುಂಭಾಗದಲ್ಲಿ ಸ್ವಚ್ಚತೆಯನ್ನು ಕಾಪಾಡುವಂತೆ ಸೂಚಿಸಿದರು. ಕಾಲೇಜಿನ ಆವರಣವನ್ನು ಪರಿಶೀಲನೆ ನಡೆಸಿದ ಅವರು, ಕಾಲೇಜಿನಲ್ಲಿರುವ ಎನ್.ಎಸ್.ಎಸ್ನ ಸಹಯೋಗದಲ್ಲಿ ಕಾಲೇಜಿನ ಆವರಣವನ್ನು ಸ್ವಚ್ಚಗೊಳಿಸಿಕೊಳ್ಳುವಂತೆ ಪ್ರಾಂಶುಪಾಲರಿಗೆ ಸಲಹೆ ನೀಡಿ, ಪ್ಲಾಸ್ಟಿಕ್ ಬಳಕೆ ಹಾಗೂ ಸ್ವಚ್ಚತೆಯನ್ನು ಕಾಪಾಡದಿದ್ದಲ್ಲಿ ಅಂತಹ ಹೋಟೆಲುಗಳ ಮಾಲೀಕರುಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಂತರ ನಗರಸಭೆಯ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ನಗರಸಭೆ ಮುಖ್ಯಾಧಿಕಾರಿ ಎಸ್.ಎ.ರಾಮ್ಪ್ರಕಾಶ್, ಪರಿಸರ ಎಂಜಿನಿಯರ್ ದಿಲೀಪ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!