27.1 C
Sidlaghatta
Monday, July 14, 2025

ನಗರದ ಹ್ದಯಭಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಬೇಕೆಂದು ಮನವಿ

- Advertisement -
- Advertisement -

“ಅಂಬೇಡ್ಕರ್ ಭವನ”ವನ್ನು ನಗರದ ಹೃದಯಭಾಗದಲ್ಲಿ ನಿರ್ಮಿಸಬೇಕೆಂದು ಒತ್ತಾಯಿಸಿ ಶುಕ್ರವಾರ ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಶಾಸಕ ವಿ. ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದರು.
ಸಾಕಷ್ಟು ವರ್ಷಗಳಿಂದ ಬೇಡಿಕೆ ಇಟ್ಟಿದ್ದರೂ ಸಹ ಸಂವಿಧಾನ ಶಿಲ್ಪಿಯ ಹೆಸರಲ್ಲಿ ನಗರದಲ್ಲಿ ಭವನ ನಿರ್ಮಿಸಿಲ್ಲ. ಸರ್ಕಾರ ಮತ್ತು ಜನಪ್ರತಿನಿಧಿಗಳ ಇಚ್ಚಾ ಶಕ್ತಿ ಕೊರತೆಯಿಂದ ನಮ್ಮ ಬೇಡಿಕೆ ಮೂಲೆ ಗುಂಪಾಗಿದೆ. ಅಂಬೇಡ್ಕರ್ ಭವನಕ್ಕೆ ಸರಿಯಾದ ಸ್ಥಳ ನಿಗಧಿ ಮಾಡಿ ಅತಿ ಶೀಘ್ರದಲ್ಲಿ ಉತ್ತಮ ಕಟ್ಟಡವನ್ನು ನಿರ್ಮಿಸಬೇಕೆಂದು ಆಗ್ರಹಿಸಿದರು.
ದಲಿತ ಸಂಘಟನೆಗಳ ಒಕ್ಕೂಟದಿಂದ ನಗರ ಸಭೆ ಸದಸ್ಯ ಚಿಕ್ಕಮುನಿಯಪ್ಪ ಮಾತನಾಡಿ, ಸುಮಾರು ವರ್ಷಗಳಿಂದ ಸುಸಜ್ಜಿತವಾದ ಡಾ. ಬಿ.ಆರ್ ಅಂಬೇಡ್ಕರ್ ಭವನವಿಲ್ಲದ ಸರ್ಕಾರದಿಂದ ಈಗಾಗಲೇ ಬಿಡುಗಡೆಯಾಗಿರುವ ಹಣವು ಸಹ ಉಪಯೋಗಕ್ಕೆ ಬಾರದಂತಾಗಿದೆ. ತಾಲ್ಲೂಕಿನ ಎಲ್ಲಾ ಸಮುದಾಯದವರಿಗೂ ಸಹ ಸದ್ಬಳಕೆಯಾಗುವಂತ ರೀತಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭವನವನ್ನು ನಿರ್ಮಿಸಲು ನಗರದ ಹೃದಯಭಾಗಲ್ಲೇ ಸ್ಥಳ ನಿಗದಿ ಮಾಡಬೇಕೆಂದು ಕೋರಿದರು.
ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಮನವಿ ಸ್ವೀಕರಿಸಿದ ಶಾಸಕ ವಿ. ಮುನಿಯಪ್ಪ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಭವನಕ್ಕೆ ಸ್ಥಳ ನಿಗಧಿ ಮಾಡುವ ಸಲುವಾಗಿ ಈಗಾಗಲೆ ಜಿಲ್ಲಾಧಿಕಾರಿಗಳ ಬಳಿ ಮಾತನಾಡಿದ್ದು, ಅವರ ಮುಖಾಂತರ ನಗರದಲ್ಲೇ ಸೂಕ್ತವಾದ ಸ್ಥಳವನ್ನು ಗುರ್ತಿಸಿಕೊಡುವುದಾಗಿ ಭರವಸೆ ನೀಡಿದರು.
ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಗಂಜಿಗುಂಟೆ ನರಸಿಂಹಮೂರ್ತಿ, ಮುಖಂಡರಾದ ಮಳ್ಳೂರು ಮುನಯ್ಯ, ಕೋಟಹಳ್ಳಿ ದ್ಯಾವಕೃಷ್ಣಪ್ಪ, ತಾತಹಳ್ಳಿ ಚಲಪತಿ, ಹುಜುಗೂರು ವೆಂಕಟೇಶ್, ಸೊಣ್ಣೇನಹಳ್ಳಿ ವೆಂಕಟೇಶ್, ಹನುಮಂತಪುರ ಕೃಷ್ಣ, ಮುತ್ತೂರು ಲಕ್ಷ್ಮಣ್, ನರಸಿಂಹಮೂರ್ತಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!