ಸುಮಾರು ೫ ಕೋಟಿ ರೂಪಾಯಿಗಳ ವೆಚ್ಚದಲ್ಲಿ ನೂತನ ನಗರಸಭಾ ಕಾರ್ಯಾಲಯದ ಕಟ್ಟಡ ನಿರ್ಮಾಣಕ್ಕೆ ಸಿದ್ದತೆ ಮಾಡಿಕೊಂಡಿದ್ದು, ನಗರಾಭಿವೃದ್ಧಿ ಇಲಾಖೆಯಿಂದ ಆದಷ್ಟು ಬೇಗ ಹಣ ಮಂಜೂರು ಮಾಡಿಸುವಂತೆ ಶಾಸಕ ಎಂ.ರಾಜಣ್ಣ ಅವರಿಗೆ ನಗರಸಭಾ ಆಯುಕ್ತ ಎಚ್.ಎ.ಹರೀಶ್ ಕಟ್ಟಡದ ನೀಲನಕ್ಷೆಯನ್ನು ಸೋಮವಾರ ನೀಡಿದರು.
ನಗರದ ಹಳೆಯ ಪುರಪೊಲೀಸ್ ಠಾಣೆಯ ಪಕ್ಕದಲ್ಲಿರುವ ನಗರಸಭೆಯ ಖಾಲಿ ನಿವೇಶನದಲ್ಲಿ ಮೂರು ಅಂತಸ್ತುಗಳ ಸುಂದರವಾದ ನಗರಸಭಾ ಕಾರ್ಯಾಲಯವನ್ನು ನಿರ್ಮಾಣ ಮಾಡಲು ನೀಲ ನಕ್ಷೆಯನ್ನು ತಯಾರಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಡಾ.ಮಂಜುಳಾ ಅವರ ಅವಧಿಯಲ್ಲಿ ಹಣ ಮಂಜೂರಾಗಿತ್ತು, ಆದರೆ ಇದುವರೆಗೂ ಕಟ್ಟಡ ಕಾಮಗಾರಿಯನ್ನು ಪ್ರಾರಂಭ ಮಾಡಲು ಸಾಧ್ಯವಾಗಿರಲಿಲ್ಲ, ಈಗ ಕಟ್ಟಡ ಕಾಮಗಾರಿ ಪ್ರಾರಂಭಿಸಲು ಸರ್ವಸಿದ್ಧತೆಯನ್ನು ನಡೆಸಲಾಗಿದೆ. ರಾಜ್ಯ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಅವರಿಗೆ ತಿಳಿಸಿ ಹಣವನ್ನು ಶೀಘ್ರವಾಗಿ ಮಂಜೂರು ಮಾಡಿಸಲು ಕೋರಿದರು.
ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ, ನಗರಸಭಾ ಸದಸ್ಯರಾದ ವೆಂಕಟಸ್ವಾಮಿ, ಷಫಿವುಲ್ಲಾ, ಜೆಡಿಎಸ್ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ರಹಮತ್ತುಲ್ಲ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -