24.1 C
Sidlaghatta
Monday, January 19, 2026

ನಗರಸಭೆಯ ಚುನಾವಣೆಯಲ್ಲಿ ವಿಜೇತರಾದ ಜೆಡಿಎಸ್ ಅಭ್ಯರ್ಥಿಗಳಿಗೆ ಸನ್ಮಾನ

- Advertisement -
- Advertisement -

ಶಿಡ್ಲಘಟ್ಟದ ನಗರಸಭೆಯ ಚುನಾವಣೆಯಲ್ಲಿ ವಿಜೇತರಾದ ಜೆಡಿಎಸ್ ಅಭ್ಯರ್ಥಿಗಳನ್ನು ಶುಕ್ರವಾರ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಮಾತನಾಡಿದರು.
ಚುನಾವಣೆಗಯಲ್ಲಿ ಜನರ ತೀರ್ಪನ್ನು ಸ್ವಾಗತಿಸೋಣ. ಪಕ್ಷವನ್ನು ಬಲಪಡಿಸಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಿ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಜನರ ಕಷ್ಟಸುಖಗಳಿಗೆ ದನಿಯಾಗಬೇಕು ಎಂದು ಅವರು ತಿಳಿಸಿದರು.
ನಮ್ಮ ಪಕ್ಷದ ಕೆಲವು ಕಾರ್ಯಕರ್ತರು ಅತ್ಯಲ್ಪ ಮತಗಳಿಂದ ಸೋತಿದ್ದೀರಿ. ಆದರೂ ಧೈರ್ಯ ಕಳೆದುಕೊಳ್ಳದೆ ಜನರ ಸೇವೆಯನ್ನು ಮಾಡಿ. ಅವರ ಕುಂದುಕೊರತೆಗಳನ್ನು ನೀಗಿಸುತ್ತಾ ಪಕ್ಷವನ್ನು ಗಟ್ಟಿಗೊಳಿಸಿ ಎಂದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಗ್ರಾಮ ವಾಸ್ತವ್ಯ ಮಾಡಲು ಹೊರಟಿರುವುದು ಮಾನವೀಯ ಕಳಕಳಿ, ನೈಜ ಅಂತಃಕರಣದಿಂದ. ಇದರ ಮುಖ್ಯ ಗುರಿ, ಆಡಳಿತ ಯಂತ್ರದ ಕಾರ್ಯವೈಖರಿ ಅರಿಯುವುದು. ಸರ್ಕಾರ ರೂಪಿಸಿದ ಯೋಜನೆ ಫಲಕಾರಿಯೇ, ಜನರ ಅಭಿಪ್ರಾಯವೇನು ಎಂಬುದನ್ನು ಅರಿಯುವುದಾಗಿದೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದವರು ಮತ್ತು ಸೋತವರೂ ಸಹ ಜನರ ನೋವು, ಕಷ್ಟ, ಸಮಸ್ಯೆಗೆ ಸ್ಪಂದಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿಗಳನ್ನು ಗೌರವಿಸಲಾಯಿತು. ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರ್, ಲಕ್ಷ್ಮೀನಾರಾಯಣರೆಡ್ಡಿ, ತಾದೂರು ರಘು, ರಾಜೇಶ್, ಸುರೇಶ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!