ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಶ್ರೀ ಮಯೂರಿ ನಾಟ್ಯಕಲಾ ಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಟರಾಜೋತ್ಸವ ಮತ್ತು ಗಾನಾಂಜಲಿ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಜಿ ಯೋಧ ಎಸ್.ವಿ.ಅಯ್ಯರ್ ಮಾತನಾಡಿದರು.
ಸಂಗೀತ, ನೃತ್ಯ ಕಲೆಗಳು ಭಾರತೀಯ ಪರಂಪರೆಯನ್ನು ಉಳಿಸುವ ಕಲೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.
ಶಾಸ್ತ್ರೀಯ ಸಂಗೀತಕ್ಕೆ ಕಠಿಣ ಅಭ್ಯಾಸದ ಅಗತ್ಯವಿದೆ. ಗಾಯಕರಿಗಿಂತ ಗಾಯನದ ಶೈಲಿ ಮುಖ್ಯ. ಗುರು ಪರಂಪರೆಯ ಮೂಲಕ ಕಲಿಯಬೇಕಾದ ಸಂಗೀತ, ನೃತ್ಯ ಕಲೆಗಳನ್ನು ಮಕ್ಕಳಿಗೆ ಕಲಿಸಬೇಕಿದೆ. ಎಲ್ಲರೂ ಈ ಕ್ಷೇತ್ರದಲ್ಲಿ ಸಾಧಕರಾಗದಿದ್ದರೂ ಕಲೆಯನ್ನು ಆಸ್ವಾದಿಸುವ ಮತ್ತು ಸುಸಂಸ್ಕೃತ ಮನಸ್ಸುಳ್ಳವರಾಗುತ್ತಾರೆ. ಈ ಮನಸ್ಥಿತಿಯುಳ್ಳವರು ಯಾವುದೇ ಕ್ಷೇತ್ರದಲ್ಲಿ ಮುಂದೆ ತೊಡಗಿಸಿಕೊಂಡರೂ ಸಮಾಜಕ್ಕೆ ಉಪಯುಕ್ತರಾಗುತ್ತಾರೆ.
ಇಂದಿನ ಒತ್ತಡದ ಪ್ರಾಪಂಚಿಕ ಬದುಕಿನಲ್ಲಿ ಸಂಗೀತವೆಂಬುದೊಂದೇ ನಮಗೆ ಸುಲಭವಾಗಿ ದಕ್ಕುವ ವಿಶ್ರಾಂತ ತಾಣ. ನಮ್ಮ ಮತ್ತು ಮುಂದಿನ ತಲೆಮಾರುಗಳ ಬದುಕು ಸಂಗೀತವೆಂಬ ಶ್ರೇಷ್ಠತೆಯನ್ನು ಎಂದೆಂದೂ ಅನುಭಾವಿಸುವ ಅವಕಾಶವನ್ನು ಜೀವಂತವಾಗಿರಿಸುವ ಪ್ರಯತ್ನವನ್ನು ಮಾಡಬೇಕಿದೆ ಎಂದು ಹೇಳಿದರು.
ಗಾನಾಂಜಲಿ ಕಾರ್ಯಕ್ರಮದಲ್ಲಿ ಸಂಗೀತ ಕಾರ್ಯಕ್ರಮಗಳು, ವೀಣೆ, ಲಘು ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಶಿಡ್ಲಘಟ್ಟ, ವಿಜಯಪುರ, ಚಿಂತಾಮಣಿ, ಬೆಂಗಳೂರಿನ ಕಲಾವಿದರು ನಡೆಸಿಕೊಟ್ಟರು. ನಟರಾಜೋತ್ಸವದ ಅಂಗವಾಗಿ ಭರತನಾಟ್ಯ ಕಾರ್ಯಕ್ರಮಗಳು ನಡೆದವು.
ಶ್ರೀ ಮಯೂರಿ ನಾಟ್ಯಕಲಾ ಕೇಂದ್ರದ ವಿದುಷಿ ಎಸ್.ವಿ.ಭಾಗ್ಯಲಕ್ಷ್ಮಿ ಅಯ್ಯರ್, ಕಲಾವಿದ ಸೋಮಶೇಖರ್ ಹಾಜರಿದ್ದರು.
- Advertisement -
- Advertisement -
- Advertisement -