19.9 C
Sidlaghatta
Sunday, July 20, 2025

ನಮ್ಮ ಕರ್ನಾಟಕ ಜನಸೈನ್ಯ ತಾಲ್ಲೂಕು ಘಟಕ ಸ್ಥಾಪನೆ

- Advertisement -
- Advertisement -

ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯವಾಗಿದೆ ಎಂದು ನಮ್ಮ ಕರ್ನಾಟಕ ಜನಸೈನ್ಯ ರಾಜ್ಯ ಘಟಕದ ಅಧ್ಯಕ್ಷ ನರಸಿಂಹಯ್ಯ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅವರು ಮಾತನಾಡಿದರು.
ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಇಲ್ಲಿನ ಅಮೂಲ್ಯ ನೆಲ, ಜಲ, ಸಂಸ್ಕೃತಿ ಹಾಗೂ ಗಡಿಗೆ ಧಕ್ಕೆ ತರುವ ಕೆಲಸ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ನಡೆಸಬೇಕು. ನಾಡಿನ ಪ್ರತಿಯೊಂದು ಸಮಸ್ಯೆಗೆ ಮುಂಚೂಣಿಯಾಗಿ ಹೋರಾಟಕ್ಕೆ ನಿಲ್ಲುವ ಕೆಲಸ ನಮ್ಮ ಸಂಘಟನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ತಾಲ್ಲೂಕು ಸಂಘಟನೆಗಳ ಜವಾಬ್ದಾರಿ ಹೆಚ್ಚಿನದ್ದು. ಸಂಘಟನೆಗೆ ಕಳಂಕ ತರದೆ ನಾಡು, ನುಡಿ ಮತ್ತು ಜನರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು. ಜನಪರ ಕೆಲಸ ಮಾಡುತ್ತಾ ಜನರ ಹೃದಯವನ್ನು ಗೆಲ್ಲಿ ಎಂದು ಅವರು ಕಿವಿ ಮಾತು ಹೇಳಿದರು.
ನಮ್ಮ ಕರ್ನಾಟಕ ಜನಸೈನ್ಯ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಬಾಲಕೃಷ್ಣ, ಉಪಾಧರ್ಯಕ್ಷರನ್ನಾಗಿ ಗೋಪಿನಾಥ್, ಪ್ರಧಾನ ಕಾರ್ಯದರ್ಶೀಯಾಗಿ ಸದಾಶಿವರೆಡ್ಡಿ ಅವರನ್ನು ಆಯ್ಕೆ ಮಾಡಿ ಆದೇಶ ಪತ್ರವನ್ನು ನೀಡಿದರು.
ನಮ್ಮ ಕರ್ನಾಟಕ ಜನಸೈನ್ಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್, ಖಜಾಂಚಿ ಗೋಪಿನಾಥ್, ಮಂಜುನಾಥ್, ನವೀನ್ ಕುಮಾರ್, ಶಿವಕುಮಾರ್, ಶಂಕರ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!