22.1 C
Sidlaghatta
Thursday, March 28, 2024

ನಾಗರಿಕ ಸಂರಕ್ಷಣಾ ಸೇವಾ ಸಮಿತಿಯ ಪ್ರತಿಭಟನೆ

- Advertisement -
- Advertisement -

ಸರ್ಕಾರಿ ಕಚೇರಿಗಳಲ್ಲಿ ನಾಗರಿಕರ ಕೆಲಸ ಕಾರ್ಯಗಳನ್ನು ಮಾಡಲು ವಿಳಂಬ ಮಾಡುತ್ತಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ನಾಗರೀಕ ಸಂರಕ್ಷಣಾ ಸೇವಾ ಸಮಿತಿಯ ಸದಸ್ಯರು ಒತ್ತಾಯಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಅವರು, ಕಂದಾಯ ಇಲಾಖೆಯೂ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ಬಡವರಿಗೆ ನ್ಯಾಯಸಿಗುತ್ತಿಲ್ಲ. ವಿನಾಕಾರಣ ಅಧಿಕಾರಿಗಳು ಅಲೆದಾಡಿಸುತ್ತಿದ್ದಾರೆ. ಶ್ರೀಮಂತರು, ಬಡವರು ಎಂಬ ತಾರತಮ್ಯ ನೀತಿಯನ್ನು ಅನುಸರಿಸಲಾಗುತ್ತಿದೆ. ಸರ್ಕಾರದಿಂದ ಬಿಡುಗಡೆಯಾಗುತ್ತಿರುವ ಯಾವುದೇ ಅನುಧಾನಗಳು ಸಂಬಂಧಪಟ್ಟ ಫಲಾನುಭವಿಗಳಿಗೆ ಸೇರದೆ ಉಳ್ಳವರ ಪಾಲಾಗುತ್ತಿವೆ. ಕಾರ್ಮಿಕರನ್ನು ವಂಚನೆ ಮಾಡಿ, ಖಾಸಗೀ ಕಂಪನಿಗಳ ಮಾಲೀಕರು, ಈ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನ್ಯಾಯ ಕೇಳಲು ಬಂದ ಬಡವರ ಮೇಲೆ ಕೆಲ ಮಧ್ಯವರ್ತಿಗಳು ದೌರ್ಜನ್ಯ, ದಬ್ಬಾಳಿಕೆಗಳನ್ನು ನಡೆಸಿ, ಬೆದರಿಸುತ್ತಿದ್ದಾರೆ.
ತಾಲ್ಲೂಕು ಕಚೇರಿ, ಕಂದಾಯ ಇಲಾಖೆ, ಭೂ ಮಾಪನ ಇಲಾಖೆ, ತಾಲ್ಲೂಕು ಪಂಚಾಯಿತಿ, ನಗರಸಭೆ, ಪೊಲೀಸ್ ಇಲಾಖೆ, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಯಬೇಕು. ಕೆರೆಗಳ ಒತ್ತುವರಿ ತೆರವು ಮಾಡಬೇಕು, ಎಲ್ಲ ಜನಾಂಗ, ವರ್ಗದವರಿಗೂ ಸ್ಮಶಾನ ಭೂಮಿಯನ್ನು ಮೀಸಲಿಡಬೇಕು. ಬಡವರಿಗೆ ನಿವೇಶನ, ಮನೆ ಮಂಜೂರು ಮಾಡುವುದು, ಎಲ್ಲ ಅರ್ಹರಿಗೂ ಬಿಪಿಎಲ್ ಕಾರ್ಡು ವಿತರಿಸುವುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ಸಮಿತಿಯ ಕಾರ್ಯದರ್ಶಿ ಎಚ್.ಎಸ್.ಸತ್ತಾರ್ ತಿಳಿಸಿದರು.
ಶಿಡ್ಲಘಟ್ಟ ಗ್ರಾಮದ ಸರ್ವೆನಂಬರ್ ೬೪/೧, ೬೪/೨, ೬೪/೩, ೬೪/೪, ೬೪/೫, ರ ಜಮೀನುಗಳು ಸರ್ಕಾರಿ ಸ್ತತ್ತುಗಳಾಗಿದ್ದು, ಸದರಿ ಭೂಮಿಗಳನ್ನು ಸರ್ಕಾರದ ಸ್ವಾಧೀನಕ್ಕೆ ಪಡೆದುಕೊಳ್ಳಬೇಕು, ಅಕ್ರಮವಾಗಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡಿರುವವರ ಮೇಲೆ ಕ್ರಿಮಿನಲ್ ಮೊಕ್ದದಮೆ ದಾಖಲಿಸಬೇಕು, ನಗರದ ರೈಲು ಹಳಿಯ ಪಕ್ಕದಲ್ಲಿರುವ ಸರ್ಕಾರಿ ಭೂಮಿಯನ್ನು ಅಳತಯೆ ಮಾಡಿಸಿ ಬೇಲಿಯನ್ನು ನಿರ್ಮಾಣ ಮಾಡಬೇಕು, ನಿವೇಶನ ರಹಿತರಿಗೆ ನೀಡಬೇಕು, ಪುರಸಭೆಯ ಮುಖ್ಯಾಧಿಕಾರಿ ರಾಮ್ಪ್ರಕಾಶ್ ಅವರ ಅವಧಿಯಲ್ಲಿ ನಡೆಸದಿರುವ ಅಕ್ರಮಗಳನ್ನು ತನಿಖೆ ನಡೆಸಬೇಕು, ಅವರನ್ನು ಕೂಡಲೇ ಅಮಾನತ್ತು ಪಡಿಸಬೇಕು, ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ನಾಗರಿಕ ಸಂರಕ್ಷಣಾ ಸೇವಾ ಸಮಿತಿಯ ಅಧ್ಯಕ್ಷ ಜಿ.ಎನ್.ವೆಂಕಟೇಶ್, ಉಪಾಧ್ಯಕ್ಷ ಬಿ.ಎ.ಮುನಿರಾಜು, ಕಾರ್ಯದರ್ಶಿ ಹೆಚ್.ಎಸ್.ಸತ್ತಾರ್, ಜಂಟಿ ಕಾರ್ಯದರ್ಶಿ ಪದ್ಮಾವತಿ, ಎನ್.ಗೋಪಾಲ್, ಶ್ರೀನಿವಾಸರಾವ್, ಭಾರತಿ, ಆರ್.ಪ್ರಕಾಶ್, ಅಪ್ಸರ್, ವಿ.ಆರ್.ರವಿಚಂದ್ರ, ಲಕ್ಷ್ಮಮ್ಮ, ಸನಾವುಲ್ಲಾ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!