Home News ನಾಗರೀಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು

ನಾಗರೀಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು

0

ಗ್ರಾಮೀಣ ಪ್ರದೇಶಗಳು ಸ್ವಚ್ಛವಾಗಿದ್ದರೆ ಅನಾರೋಗ್ಯ ಕಡಿಮೆಯಾಗುತ್ತದೆ. ಹಾಗಾಗಿ ಪ್ರತಿಯೊಬ್ಬ ನಾಗರೀಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂದು ಗಂಜಿಗುಂಟೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಚೊಕ್ಕನಹಳ್ಳಿಮೂರ್ತಿ ಹೇಳಿದರು.
ತಾಲ್ಲೂಕಿನ ಗಂಜಿಗುಂಟೆ ಗ್ರಾಮದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಬುಧವಾರ ಆಯೋಜನೆ ಮಾಡಲಾಗಿದ್ದ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶಗಳು ಸ್ವಚ್ಚವಾಗಿರಬೇಕು ಎಂಬ ಉದ್ದೇಶದಿಂದ ಸರ್ಕಾರ ಗ್ರಾಮ ಪಂಚಾಯತಿಗಳಿಗೆ ಸಾಕಷ್ಟು ಅನುಧಾನಗಳನ್ನು ಬಿಡುಗಡೆ ಮಾಡುತ್ತಿದೆ. ನರೇಗಾ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮುಖಾಂತರ ಹಳ್ಳಿಗಳ ಸ್ವಚ್ಛತೆಯನ್ನು ಕಾಪಾಡಲು ಒತ್ತು ನೀಡಲಾಗುತ್ತಿದೆ ಎಂದರು.
ಕುಟುಂಬಕ್ಕೊಂದು ಶೌಚಾಲಯ ನಿರ್ಮಾಣ, ಚರಂಡಿಗಳ ನಿರ್ಮಾಣ, ತೋಟಗಳಲ್ಲಿ ಬದುಗಳ ನಿರ್ಮಾಣ, ದನದ ಕೊಟ್ಟಿಗೆಗಳ ನಿರ್ಮಾಣ ಸೇರಿದಂತೆ ಹಲವು ಉದ್ದೇಶಗಳಿಗೆ ಸರ್ಕಾರದಿಂದ ಬಿಡುಗಡೆಯಾಗುವಂತಹ ಅನುದಾನಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಆಸ್ಪತ್ರೆಯ ಆವರಣವನ್ನು ಸ್ವಚ್ಚಗೊಳಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿ ವೀರಭದ್ರಯ್ಯ, ಮುಖಂಡರಾದ ಚಂದ್ರಶೇಖರ್‌ರೆಡ್ಡಿ, ವೆಂಕಟೇಶ್, ಮುಖ್ಯಶಿಕ್ಷಕ ಶ್ರೀನಿವಾಸ್, ನಾಗರಾಜು, ವೆಂಕಟರಾಮಪ್ಪ ಮತ್ತಿತರರು ಹಾಜರಿದ್ದರು.