ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮ

- Advertisement -
- Advertisement -

ನಾಡಪ್ರಭು ಕೆಂಪೇಗೌಡರು ವಕ್ಕಲಿಗ ಸಮುದಾಯದ ಏಳಿಗೆಗಾಗಿ ಕಂಡಂತಹ ಕನಸುಗಳನ್ನು ನನಸು ಮಾಡುವ ಜವಾಬ್ದಾರಿ ಇಂದಿನ ಸಮುದಾಯದ ಮುಖಂಡರೂ ಸೇರಿದಂತೆ ಯುವಜನತೆಯ ಮೇಲಿದೆ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.
ನಗರದ ದಿಬ್ಬೂರಹಳ್ಳಿ ರಸ್ತೆಯ ನ್ಯಾಯಾಲಯದ ಸಮೀಪವಿರುವ ಮೈದಾನದಲ್ಲಿ ಬುದವಾರ ಶ್ರೀ ಕೆಂಪೇಗೌಡರ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೈತರಿಗಾಗು ಬೆಂಗಳೂರು ನಗರ ವ್ಯಾಪ್ತಿಯೊಂದರಲ್ಲಿಯೇ ಸುಮಾರು ೧೫೦ ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ. ಅವರು ದೂರದೃಷ್ಠಿಯಿಂದ ನಿರ್ಮಿಸಿದ ಕೆರೆಗಳಿಂದ ಸಾವಿರಾರು ಮಂದಿ ರೈತರು ವ್ಯವಸಾಯ ಮಾಡುವ ಮೂಲಕ ಜೀವನ ಕಟ್ಟಿಕೊಂಡಿದ್ದಾರೆ ಎಂದರು.
ವಕ್ಕಲಿಗ ಸಮುದಾಯಕ್ಕೆ ಅನ್ನದಾತ ಎಂಬ ವಿಶಿಷ್ಟವಾದ ಗೌರವವಿದೆ. ಇದನ್ನು ಉಳಿಸಿಕೊಂಡು ಹೋಗುವುದೂ ಸೇರಿದಂತೆ ಕೆಂಪೇಗೌಡರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಪ್ರತಿಯೊಬ್ಬರೂ ಉತ್ತಮ ಜೀವನ ನಡೆಸಬೇಕು ಎಂದರು.
ರಾಜ್ಯ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಮಾತನಾಡಿ ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಇಂದು ವಿಶ್ವ ಖ್ಯಾತಿ ಪಡೆದಿದೆ. ಅವರು ದೂರದೃಷ್ಠಿಯಿಂದ ನಿರ್ಮಿಸಿದ ಕೆರೆಗಳು ಸೇರಿದಂತೆ ವಿವಿಧ ಸಮುದಾಂiiಗಳಿಗಾಗಿ ಪ್ರತ್ಯೇಕ ಪೇಟೆಗಳು ಸಮಾನತೆ ಹಾಗು ಸಹಬಾಳ್ವೆಗೆ ಹೆಸರಾಗಿದೆ ಎಂದರು.
ಮಾಜಿ ಶಾಸಕ ಎಂ.ರಾಜಣ್ಣ, ವಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ರಮೇಶ್ ಮತ್ತಿತರರು ಮಾತನಾಡಿದರು. ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ಹಾಗು ಚಂದ್ರಶೇಖರನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಜನಾಂಗದ ಸಾಧಕರನ್ನು ಹಾಗು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಸನ್ಮಾಣಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ವಕ್ಕಲಿಗರ ಸಂಘದ ನಿರ್ದೇಶಕರಾದ ವಕ್ಕಲೇರಿ ರಾಮಚಂದ್ರ, ಎಂ.ಎಲ್.ಸತೀಶ್, ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ(ಪುಟ್ಟು), ತಹಸೀಲ್ದಾರ್ ಎಸ್.ಅಜಿತ್‌ಕುಮಾರ್ ರೈ, ಮುಖಂಡರಾದ ಕೆ.ಗುಡಿಯಪ್ಪ, ಹಿರಿಯ ವಕೀಲ ಎಂ.ಪಾಪಿರೆಡ್ಡಿ, ಬಿ.ವಿ.ಮುನೇಗೌಡ, ಎಸ್.ಎಂ.ನಾರಾಯಣಸ್ವಾಮಿ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಸುಬ್ಬಾರೆಡ್ಡಿ, ಮತ್ತಿತರರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!