ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಈ ಹಿಂದೆ ನಡೆದಿರುವ 6 ಕನ್ನಡ ಸಾಹಿತ್ಯ ಸಮ್ಮೇಳದ ಸಮ್ಮೇಳನಾದ್ಯಕ್ಷರು ಮೇಲ್ವರ್ಗದ ಸಮುದಾಯಗಳಿಗೆ ಸೇರಿದವರಾಗಿದ್ದಾರೆ. ಆದರೆ ಇತರೆ ಸಮುದಾಯಗಳಲ್ಲಿ ಹಲವಾರು ಸಾಧನೆಗಳನ್ನು ಮಾಡಿರುವ ಅರ್ಹ ಸಾಧಕರು ಎಲೆಮೆರೆ ಕಾಯಿಯಂತಿದ್ದಾರೆ.
ಅಂಥವರಲ್ಲಿ ಒಬ್ಬರಾದ ಪಿಂಡಿಪಾಪನಹಳ್ಳಿ ಗ್ರಾಮದ ನಾಡೋಜ ಮುನಿವೆಂಕಟ್ಟಪ್ಪ ಅವರನ್ನು ಈ ಬಾರಿ ಶಿಡ್ಲಘಟ್ಟ ತಾಲ್ಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ದೇವರಮಳ್ಳೂರು ವಿ. ಕೃಷ್ಣಪ್ಪ ಒತ್ತಾಯಿಸಿದ್ದಾರೆ.
ನಾಡೋಜ ಮುನಿವೆಂಕಟ್ಟಪ್ಪ ಅವರು ನಾಡೋಜ ಪ್ರಶಸ್ತಿ ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. 1992 ರಲ್ಲಿ ಕರ್ನಾಟಕ ಸರ್ಕಾರವು ಅವರಿಗೆ ರಾಜ್ಯೋತ್ಸವ ಪ್ರಶ್ತಿಯನ್ನೂ ಸಹ ನೀಡಿ ಗೌರವಿಸಿದೆ.
1992 ರಲ್ಲಿ ಜಪಾನಿನಲ್ಲಿ ನಡೆದ ತಮಟೆಯ ಸಿಡಿಲು ಸದ್ದು ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿರುವುದು ತಾಲ್ಲೂಕಿನ ಹೆಮ್ಮೆಯ ವಿಚಾರವಾಗಿದೆ. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕಲಾ ಪ್ರತಿಭೋತ್ಸವ ಪ್ರಶಸ್ತಿ, ಮೈಸೂರು ದಸರಾ ಪ್ರಶಸ್ತಿ ಸೇರಿದಂತೆ ಇನ್ನೂ ಹಲವು ಪ್ರಶಸ್ತಿಗಳನ್ನು ಪಡೆದು ನಮ್ಮ ತಾಲ್ಲೂಕಿನ ಕೀರ್ತಿಯನ್ನು ದೇಶ ವಿದೇಶಗಳಲ್ಲಿ ಪಸರಿಸಿರುತ್ತಾರೆ.
ಮೂಡುಬಿದರೆಯಲ್ಲಿ ನಡೆದ 71 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿತರಾಗಿದ್ದಾರೆ. ನಮ್ಮ ರಾಜ್ಯಕ್ಕೆ ಕೀರ್ತಿಯನ್ನು ತಂದಿರುವ ಪಿಂಡಿಪಾಪನಹಳ್ಳಿ ನಾಡೋಜ ಮುನಿವೆಂಕಟಪ್ಪನವರನ್ನು ಈ ಭಾರಿ ನಡೆಯುವ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೆಳದ ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಮತ್ತು ಪಧಾದಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಇವರ ಆಯ್ಕೆ ವಿಚಾರದಲ್ಲಿ ಹಲವಾರು ವಿವಿಧ ಸಂಘ ಸಂಸ್ಥೆಗಳು ಸಹಮತ ಸೂಚಿಸಿರುತ್ತಾರೆ. ಆದ್ದರಿಂದ ಇಂತಹ ಸಾಧಕರನ್ನು ಕಡೆಗಣಿಸಿದ ಪಕ್ಷದಲ್ಲಿ ಮುಂದಿನ ಆಗುಹೋಗುಳಿಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇರ ಹೊಣೆಯಾಗಿರುತ್ತದೆ ಎಂದು ಸಂಘದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -
- Advertisement -
- Advertisement -