ತಾಲ್ಲೂಕಿನ ನಾಲ್ಕು ಗ್ರಾಮ ಪಂಚಾಯತಿ ಕಾರ್ಯಾಲಯಗಳ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಅಧಿಕಾರಾವಧಿ ಕೊನೆಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದೀಪ್ತಿ ಆದಿತ್ಯಾ ಕಾನಡೆ ಈ ನಾಲ್ಕು ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮ ಪಂಚಾಯತಿಗೆ ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಶ್ರೀನಾಥಗೌಡ, ಮಳಮಾಚನಹಳ್ಳಿ ಗ್ರಾಮ ಪಂಚಾಯತಿಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೇವೇಗೌಡ, ನಾಗಮಂಗಲ ಗ್ರಾಮ ಪಂಚಾಯತಿಗೆ ಅಕ್ಷರದಾಸೋಹ ಸಹಾಯಕ ನಿರ್ದೇಶಕ ವೆಂಕಟೇಶ್, ಹೊಸಪೇಟೆ ಗಮ ಪಂಚಾಯತಿಗೆ ತಾಲ್ಲೂಕು ಪಂಚಾಯತಿನ ಸಹಾಯಕ ಲೆಕ್ಕಾಧಿಕಾರಿ ವರದರಾಜುರನ್ನು ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದ್ದಾರೆ.
ಗ್ರಾಮ ಪಂಚಾಯತಿ ಆಡಳಿತಾಧಿಕಾರಿಗಳಾಗಿ ನೇಮಕಗೊಂಡಿರುವ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರ ಅಧಿಕಾರ ಹಾಗು ಕರ್ತವ್ಯಗಳನ್ನು ಚಲಾಯಿಸುವ ಅಧಿಕಾರ ನೀಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







