14.1 C
Sidlaghatta
Wednesday, December 24, 2025

ನಿಜಗುಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ

- Advertisement -
- Advertisement -

ಶರಣರ ಮಹತ್ವಗಳನ್ನು ತತ್ವಗಳನ್ನು ಮತ್ತು ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಮಾತ್ರ ಶರಣರ ಜಯಂತ್ಯುತ್ಸವ ಆಚರಿಸಿದ್ದಕ್ಕೆ ಸಾರ್ಥಕ ವಾಗುತ್ತದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದಲ್ಲಿ ಶನಿವಾರ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಶ್ರೀ ನಿಜಗುಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನೇರ ನಡೆ ನುಡಿಗೆ ಹೆಸರಾದ ಚೌಡಯ್ಯನವರು ನಿಜ ಶರಣ ಎಂದೇ ಖ್ಯಾತಿಯನ್ನು ಗಳಿಸಿದ್ದರು. ಅವರ ಆದರ್ಶ, ಜೀವನ ಮತ್ತು ಸಂದೇಶಗಳು ಎಲ್ಲರಿಗೂ ಪ್ರೇರಣೆಯಾಗಿವೆ. 12 ನೇ ಶತಮಾನದಲ್ಲಿ ವಚನ ಸಾಹಿತ್ಯದ ಮೂಲಕ ಸಾಮಾಜಿಕ ಮೌಢ್ಯತೆಯನ್ನು ಹೊಡೆದು ಹಾಕುವಲ್ಲಿ ಶ್ರಮಿಸಿದ ನಿಜಗುಣ ಅಂಬಿಗರ ಚೌಡಯ್ಯ ನವರ ಸಾಧನೆ ಅವಿಸ್ಮರಣೀಯ ಎಂದು ಹೇಳಿದರು.
ಅಂಬಿಗರ ಚೌಡಯ್ಯನವರ ಭಾವಚಿತ್ರವನ್ನು ಹೂವಿನ ಪಲ್ಲಕ್ಕಿಯಲ್ಲಿ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ಜಿಲ್ಲಾ ಬೆಸ್ತರ ಸಂಘದ ಅಧ್ಯಕ್ಷ ಕೆ.ಜಯರಾಮ್‌, ತಾಲ್ಲೂಕು ಅಧ್ಯಕ್ಷ ಡಿ.ಎನ್‌.ಶಿವಣ್ಣ, ಕಾರ್ಯದರ್ಶಿ ಎಚ್‌.ಎನ್‌.ಗೋಪಾಲ್‌, ನಗರಾಧ್ಯಕ್ಷ ಎಸ್‌.ಎನ್‌.ಕೃಷ್ಣಮೂರ್ತಿ, ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಬಿಸಿಎಂ ಹಾಸ್ಟೆಲ್‌ನ ಶಂಕರ್‌, ಸಿಡಿಪಿಒ ಲಕ್ಷ್ಮೀದೇವಮ್ಮ, ಶಿರಸ್ತೆದಾರ್‌ ನರೇಂದ್ರಬಾಬು ಮತ್ತಿತರರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!